ಮನೆ ರಾಜ್ಯ ವಿಧಾನಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್ ಟಿಕೆಟ್

ವಿಧಾನಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್ ಟಿಕೆಟ್

0

ಬೆಂಗಳೂರು (Bengaluru)-ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ದಾವಣೆಗೆರೆ ಮೂಲದ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗರಾಜ್ ಯಾದವ್ ಹೆಸರನ್ನು ಅಂತಿಮಗೊಳಿಸಿದೆ.

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನಾವಾಗಿದ್ದು, ಟಿಕೆಟ್ ಸರ್ಕಸ್ ಫೈಟ್ ನಂತರ ಇದೀಗ ಹೆಸರು ಘೋಷಣೆಯಾಗಿದೆ.