ಮನೆ ಅಪರಾಧ ಅಪರಿಚಿತ ವಾಹನ‌ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

ಅಪರಿಚಿತ ವಾಹನ‌ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

0

ಕೊಪ್ಪಳ: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಒಣಬಳ್ಳಾರಿ ಬಳಿಯ ರಾ.ಹೆ 50 ರಲ್ಲಿ ನಡೆದಿದೆ.

Join Our Whatsapp Group

ರಾಮಣ್ಣ(55) ಮೃತಪಟ್ಟ ಎಎಸ್ಐ.

ಮುನಿರಾಬಾದ ಪೊಲೀಸ್ ಠಾಣೆಯಲ್ಲಿ‌ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಣ್ಣ ಹೆದ್ದಾರಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಳೆದ ರಾತ್ರಿ ಕರ್ತವ್ಯ‌ ನಿರ್ವಹಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಎಎಸ್ಐ ಸಾವನ್ನಪ್ಪಿದ್ದು, ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.