ಬೆಂಗಳೂರು: ಕರ್ನಾಟಕದ ಹಲವೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಜನರ ಬದುಕನ್ನೇ ಬೀದಿಗೆ ತರುತ್ತಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದೀಗ ಕರ್ನಾಟಕ ಸರ್ಕಾರ, ಮಳೆ ಹಾನಿ ಪರಿಹಾರಕ್ಕೆ ಹಣ ಬಿಡುಗಡೆ ಮಾಡಿದೆ. ಇಂದು (ಜುಲೈ 19) ವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ ನಡೆದಿದ್ದು, ಈ ವೇಳೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.
ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಸಂಪುಟ ಸಭೆಯಲ್ಲಿ ಹಾನಿ ಪರಿಹಾರ ಬಗ್ಗೆ ಚರ್ಚೆ ಮಾಡುತ್ತೇವೆ. ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆ ಆಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ ಶೇಕಡಾ 9ರಷ್ಟು ಹೆಚ್ಚು ಮಳೆಯಾಗಿದೆ. ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ನೀಡಲಾಗಿದ್ದು, ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
6 ಜಿಲ್ಲೆಗಳಲ್ಲಿ 5 ಎನ್ಡಿಆರ್ಎಫ್ ತುಕಡಿ ನಿಯೋಜಿಸಲಾಗಿದೆ. ಸಮಸ್ಯೆ ಉಂಟಾಗುವ 2,225 ಗ್ರಾಮಗಳನ್ನು ಗುರುತಿಸಲಾಗಿದ್ದು, 1,200ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಅಲ್ಲದೇ ತಾಲೂಕು ಮಟ್ಟದ ಅಧಿಕಾರಿ ಪ್ರತಿ ಗ್ರಾಮ ಪಂಚಾಯಿತಿಗೆ ಪ್ರವಾಹ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಗ್ರಾ.ಪಂ. ಟಾಸ್ಕ್ಫೋರ್ಸ್ಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.