ಹುಬ್ಬಳ್ಳಿ: ದೇಶದ 270 ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ ನಡೆಸಿದ್ದ ಮೂವರು ಸೈಬರ್ ವಂಚಕರನ್ನು ಇಂದು(ಶುಕ್ರವಾರ) ದೆಹಲಿ ಹಾಗೂ ಮುಂಬೈನಲ್ಲಿ ಹುಬ್ಬಳ್ಳಿ ಸೈಬರ್ ಕ್ರೈಮ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದೆಹಲಿ ಮೂಲದ ನಿಖಿಲ್ ಕುಮಾರ್ ರೌನಿ, ಸಚಿನ್ ಬೋಲಾ ಮತ್ತು ಮುಂಬೈ ಮೂಲದ ನಿಗಮ್ ಬಂಧಿತರು. ಇದರಲ್ಲಿ ಇಬ್ಬರು ಸಾಫ್ಟವೇರ್ ಇಂಜಿನಿಯರ್ ಆಗಿದ್ದು, ಓರ್ವ ಬಟ್ಟೆ ವ್ಯಾಪಾರಿಯಾಗಿದ್ದಾನೆ.
ಕೋಡಿಂಗ್, ಡಿಕೋಡಿಂಗ್ ನಲ್ಲಿ ಎಕ್ಸ್ಪರ್ಟ್ ಆಗಿದ್ದ ಇಬ್ಬರು ವಂಚಕರು, ಕರ್ನಾಟಕ, ಮಹಾರಾಷ್ಟ್ರ ಸೇರಿ ಅನೇಕ ಕಡೆ ವಂಚಿಸಿದ್ದಾರೆ. ಸಾರ್ವಜನಿಕರಿಗೆ ವಂಚನೆ ಮಾಡಿ ಅವರಿಂದ ಸರ್ಕಾರಿ, ಖಾಸಗಿ ಬ್ಯಾಂಕ್ಗಳಿಗೆ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಸೈಬರ್ ವಂಚಕರು, ನಕಲಿ ಖಾತೆ ಸೃಷ್ಟಿಸಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದರು. ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೊಬೈಲ್ ಸಂಪರ್ಕದ ಜಾಡು ಹಿಡಿದು ಮೂವರ ಅರೆಸ್ಟ್
ಇನ್ನು ವಂಚನೆ ಕುರಿತು ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ಆಧರಿಸಿ ಬ್ಯಾಂಕ್ ಖಾತೆಯ ವಿವರ, ವಿಳಾಸ ಹಾಗೂ ಮೊಬೈಲ್ ಸಂಪರ್ಕದ ಜಾಡು ಹಿಡಿದು ಹೊರಟ ಪೊಲೀಸರು, ಇದೀಗ ಮೂವರನ್ನು ಒಂದೊಂದು ಕಡೆಗಳಲ್ಲಿ ಬಂಧಿಸಿದ ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸರು, ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
ಸೈಬರ್ ವಂಚನೆ ತಡೆಗೆ ಹೊಸ ಇಟ್ಟಿದ್ದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ಬ್ಯಾಂಕ್ಗಳು ಮತ್ತು ಟೆಲಿಕಾಂ ಕಂಪನಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಇದರಿಂದ ಸೈಬರ್ ಅಪರಾಧದಲ್ಲಿ ಭಾಗಿಯಾಗಿರುವ ಬ್ಯಾಂಕ್ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬಹುದಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.