ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆಆರ್ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು. ಆದ್ದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ,ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.
ಭಾರಿ ಮಳೆಗೆ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 10 ಸಾವಿರ ದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲು ತೀರ್ಮಾನಿಸಲಾಗಿದೆ. ಒಳಹರಿವು ಹೆಚ್ಚಳವಾದ್ರೆ ಹೊರಹರಿವು ಹೆಚ್ಚಿಸಲು ನಿರ್ಧರಿಸಿ, ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡು ದಂಡೆಗಳಲ್ಲಿನ ಸಾರ್ವಜನಿಕರು ಸ್ಥಳಾಂತರಗೊಳ್ಳಲು ಕಾವೇರಿ ನೀರಾವರಿ ನಿಗಮ ಮನವಿ ಮಾಡಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ 124.80 ಅಡಿ ನೀರು ಸಂಗ್ರಹ ಹೊಂದಿದ್ದು, ಸದ್ಯ ಜಲಾಶಯದಲ್ಲಿ 107.60 ಅಡಿ ನೀರು ಸಂಗ್ರಹವಾಗಿದೆ. ಕೆಲವೇ ದಿನಗಳ ಕೆಳಗೆ ಜಲಾಶಯದ ಹಿನ್ನೀರು ಪ್ರದೇಶ ಸಂಪೂರ್ಣವಾಗಿ ಖಾಲಿ ಖಾಲಿಯಾಗಿತ್ತು. ಇದೀಗ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿದ್ದು, ಯಾವುದೇ ಸಮಯದಲ್ಲಾದರೂ ನೀರು ಬಿಡುಗಡೆ ಸಾಧ್ಯತೆಯಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.