ಮನೆ ಅಪರಾಧ ಹುಬ್ಬಳ್ಳಿಯಲ್ಲಿ ಸರಣಿ ಅಪಘಾತ: 8 ಮಂದಿ ಸಾವು

ಹುಬ್ಬಳ್ಳಿಯಲ್ಲಿ ಸರಣಿ ಅಪಘಾತ: 8 ಮಂದಿ ಸಾವು

0

ಹುಬ್ಬಳ್ಳಿ(Hubballi): ಸೋಮವಾರ ತಡರಾತ್ರಿ ಹುಬ್ಬಳ್ಳಿ ಹೊರವಲಯದಲ್ಲಿ ಭೀಕರ ಸರಣಿ ಅಪಘಾತ ನಡೆದಿದ್ದು, 8 ಮಂದಿ ಸಾವಿಗೀಡಾಗಿರುವ ಧಾರುಣ ಘಟನೆ ನಡೆದಿದೆ.

ತಾರಿಹಾಳ ಬೈಪಾಸ್‌ನ ಧಾರಾವತಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ 1.30ರ ವೇಳೆ ಸರಣಿ ಅಪಘಾತ ನಡೆದಿದ್ದು, 8 ಮಂದಿ ಸಾವಿಗೀಡದಾಗಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

‘ಸದ್ಯದ ಮಾಹಿತಿ ಪ್ರಕಾರ, ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಸರಣಿ ಅಪಘಾತದಲ್ಲಿ ನ್ಯಾಷನಲ್ ಟ್ರಾವೆಲ್ಸ್ ಟೂರಿಸ್ಟ್ ಬಸ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು.ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಮೃತರ ಪೈಕಿ ನಾಲ್ವರನ್ನು ಬಸ್ ಚಾಲಕರಾದ ಅತಾವುಲ್ಲಾ ಹಾಗೂ ನಾಗರಾಜ, ಚಿಕ್ಕೋಡಿಯ ಬಾಬುಸಾಹೇಬ್ (55), ಮೈಸೂರು ಮೂಲದ ಮಹ್ಮದ್ ದಯ್ಯಾನ್ (17) ಎಂದು ಗುರುತಿಸಲಾಗಿದೆ. ಇನ್ನುಳಿದವರ ಹೆಸರು ಗೊತ್ತಾಗಬೇಕಿದೆ.20 ಮಂದಿ ಕಿಮ್ಸ್‌ನಲ್ಲಿ ದಾಖಲಾಗಿದ್ದಾರೆ. ಐವರ ಸ್ಥಿತಿ ಚಿಂತಾಜನಕವಾಗಿದೆ‌ .