ಬಾಗಲಕೋಟೆ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದರು.
ನಗರದಲ್ಲಿ ಸುತ್ತಿದಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಮೂಡಾ ಹಗರಣ ಬಂದಿದೆ. ಈ ಆಪಾದನೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದ ಮೇಲೆ ಅವರು ಪ್ರತಿಯಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 22 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರೈತನ ತೆರಿಗೆ ಹಣ ಸಂಪೂರ್ಣ ದುರುಪಯೋಗ ಆಗುತ್ತಿದೆ ಎನ್ನುವುದು ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಅನುಮಾನವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳು ನಡೆದಿದೆ. ಅವುಗಳನ್ನು ಸಿಬಿಐಗೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಆವಾಗ ಹೇಳುತ್ತಿದ್ದರು. ಈಗ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಅಪಾದಿಸುತ್ತಿದ್ದಾರೆ. ಭಯ ಪಕ್ಷಗಳ ನಾಯಕರು ಕೇವಲ ತನಿಖೆಯಾಗಲಿ ಎಂದು ಹೇಳುತ್ತಿದ್ದಾರೆ ವಿನಃ ಸಿಬಿಐಗೆ ನೀಡಲು ಯಾಕೆ ಹಿಂಜರಿಯುತ್ತಿದ್ದಾರೆ. ದೇಶದಲ್ಲಿ ಎರಡು ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ನೀಡಿದರೆ ರಾಜ್ಯ ಮತ್ತು ದೇಶದಲ್ಲಿ ಯಾರು ಭ್ರಷ್ಟಾಚಾರ ಹಗರಣಗಳು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿ ಜನರ ಮುಂದೆ ಬರುತ್ತದೆ. ಇಲ್ಲವಾದಲ್ಲಿ ಕೇವಲ ಪರಸ್ಪರ ಆರೋಪ ಆಪಾದನೆಗಳನ್ನು ಮಾಡಿದರೆ. ತಪ್ಪಿಸ್ತಸ್ಥರು ಯಾರು ಎಂಬುದು ಹೊರಗೆ ಬರುವುದಿಲ್ಲ. ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ. ಸಿಬಿಐಗೆ ನೀಡಲು ಯಾರು ಸಿದ್ದವಿಲ್ಲ. ಒಬ್ಬರನ್ನೊಬ್ಬರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ: ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಆರೋಪಿಸಿದರು. ಶಿಕಾರಿಪುರದಲ್ಲಿ ಈಗಿನ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಸನಗೌಡ ಯತ್ನಾಳ, ಪ್ರತಾಪ್ ಸಿಂಹ, ಸಿ.ಟಿ. ರವಿ ಅವರ ಮಾತುಗಳು ನೂರಕ್ಕೆ ನೂರು ಸತ್ಯ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇರುವುದರಿಂದ ರಾಜಕೀಯ ಭ್ರಷ್ಟಾಚಾರ, ವ್ಯಬಿಚಾರ ನಡೆಯುತ್ತಿರುವುದು ರಾಜ್ಯದ ಜನರಿಗೆ ಗೊತ್ತಾಗಿದೆ. ಈ ಹೊಂದಾಣಿಕೆ ಕೂಡಾ ಹೊರಗಡೆ ಬರುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳು, ಅವ್ಯವಹಾರಗಳನ್ನು ಸಿಬಿಐಗೆ ನೀಡಬೇಕು ಎಂದು ಬಾಗಲಕೋಟೆಯಲ್ಲಿ ಈಶ್ವರಪ್ಪ ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.