ಬೆಂಗಳೂರು: ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ, ರೀಲ್ಸ್ ಸೇರಿದಂತೆ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಪಡದ ಯಾವುದೇ ವಿಷಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡದಂತೆ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಸಿದ್ದಾರೆ.
ಸಮವಸ್ತ್ರದಲ್ಲಿರುವ ಫೋಟೋ/ರೀಲ್ಸ್ /ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಪೊಲೀಸ್ ಇಲಾಖೆಯ ಅಧಿಕೃತ ಕೆಲಸಗಳ ಕುರಿತು ಅನಿಸಿಕೆ ವ್ಯಕ್ತಪಡಿಸುವುದು ಇಲಾಖೆಯ ನಿಯಮ ಮತ್ತು ಪಾಲನೆಗಳಿಗೆ ವಿರುದ್ಧ. ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ.
ಪೊಲೀಸ್ ಸಮವಸ್ತ್ರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತ. ಆದ್ದರಿಂದ ಯಾವುದೇ ಸಾರ್ವಜನಿಕ ಅಥವಾ ಡಿಜಿಟಲ್ ಫೋರಮ್ನಲ್ಲಿ ಇದರ ಬಳಕೆ ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕು. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರ ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾಧ್ಯಮಗಳು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಅಧಿಕೃತ ಮಾಹಿತಿ ಹಂಚಿಕೊಳ್ಳಲು ಅವಕಾಶವಿದೆ. ಯಾವುದೇ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಕಮಿಷನರ್ ಸೂಚಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.