ಹಾಸನ: ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.
ಸರ್ಕಾರದ ಅನುಮತಿ ಇಲ್ಲದೆ, ಖಾಸಗಿ ಜಾಗದಲ್ಲಿ ರಾತ್ರೋ ರಾತ್ರಿ ಕಡತ ನಾಶ ಮಾಡಿರುವ ಆರೋಪ ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗೇಂದ್ರ ವಿರುದ್ದ ಕೇಳಿ ಬಂದಿದೆ .
ದೇವರಾಜ ಅರಸು ನಿಗಮದ್ದು ಎಂದು ಹೇಳಲಾದ ದಾಖಲೆಗಳನ್ನು ಸುಡುತ್ತಿರುವ ವಿಡಿಯೋಗಳ ಸಮೇತ ಹಾಸನ ಜಿಲ್ಲಾಧಿಕಾರಿಗೆ ಗ್ರಾ.ಪಂ. ಸದಸ್ಯ, ಜೆಡಿಎಸ್ ಮುಖಂಡ ದೂರು ನೀಡಿದ್ದಾರೆ.
ಕೆಲ ಮದ್ಯವರ್ತಿಗಳ ಜೊತೆ ಸೇರಿ ಸರ್ಕಾರಿ ಯೋಜನೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕುರುವಂಕ ಗ್ರಾ.ಪಂ. ಸದಸ್ಯ ಬೈರಗೊಂಡನಹಳ್ಳಿಯ ಉಮೇಶ್ ಅವರು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ನಿಗಮಗಳ ಅಕ್ರಮ ಸರಣಿಯಾಗಿ ಹೊರ ಬರುತ್ತಿರುವ ಹಿನ್ನೆಲೆ ರಾತ್ರೋ ರಾತ್ರಿ ಕಡತ ನಾಶ ಮಾಡಲಾಗಿದೆ ಎಂದು ಉಮೇಶ್ ಅವರು ಡಿಸಿಗೆ ದೂರು ಸಲ್ಲಿಸಿದ್ದಾರೆ.
ಜುಲೈ 7 ರಿಂದ 10ರ ಅವಧಿಯಲ್ಲಿ ಅರಸೀಕೆರೆ ತಾಲೂಕಿನಲ್ಲಿ ಹಬ್ಬನಘಟ್ಟ ಗ್ರಾಮದ ಖಾಸಗಿ ಜಾಗದಲ್ಲಿ ಕಡತಗಳನ್ನು ಸುಟ್ಟು ನಾಶ ಮಾಡಲಾಗಿದೆ ಎಂದು ಉಮೇಶ್ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲು ನಿನ್ನೆ ಡಿಸಿಗೆ ದೂರು ನೀಡಿದ್ದು ಇದೀಗ ಮತ್ತೊಂದು ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿದೆ. ಇದು ಯಾವ ತಿರುವು ಪಡೆದುಕೊಳ್ಳುತ್ತೆ ಎಂದು ಕಾದು ನೋಡಬೇಕಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.