ಮನೆ ಅಪರಾಧ ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ: ರಾತ್ರೋ ರಾತ್ರಿ ಕಡತಗಳಿಗೆ ಬೆಂಕಿ

ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ: ರಾತ್ರೋ ರಾತ್ರಿ ಕಡತಗಳಿಗೆ ಬೆಂಕಿ

0

ಹಾಸನ: ಹಾಸನದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.

Join Our Whatsapp Group

ಸರ್ಕಾರದ ಅನುಮತಿ ಇಲ್ಲದೆ, ಖಾಸಗಿ ಜಾಗದಲ್ಲಿ ರಾತ್ರೋ ರಾತ್ರಿ ಕಡತ ನಾಶ ಮಾಡಿರುವ ಆರೋಪ ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗೇಂದ್ರ ವಿರುದ್ದ ಕೇಳಿ ಬಂದಿದೆ .

ದೇವರಾಜ ಅರಸು ನಿಗಮದ್ದು ಎಂದು ಹೇಳಲಾದ ದಾಖಲೆಗಳನ್ನು ಸುಡುತ್ತಿರುವ ವಿಡಿಯೋಗಳ ಸಮೇತ ಹಾಸನ ಜಿಲ್ಲಾಧಿಕಾರಿಗೆ ಗ್ರಾ.ಪಂ. ಸದಸ್ಯ, ಜೆಡಿಎಸ್ ಮುಖಂಡ ದೂರು ನೀಡಿದ್ದಾರೆ.

ಕೆಲ ಮದ್ಯವರ್ತಿಗಳ ಜೊತೆ ಸೇರಿ ಸರ್ಕಾರಿ ಯೋಜನೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕುರುವಂಕ ಗ್ರಾ.ಪಂ. ಸದಸ್ಯ ಬೈರಗೊಂಡನಹಳ್ಳಿಯ ಉಮೇಶ್ ಅವರು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ನಿಗಮಗಳ ಅಕ್ರಮ ಸರಣಿಯಾಗಿ ಹೊರ ಬರುತ್ತಿರುವ ಹಿನ್ನೆಲೆ ರಾತ್ರೋ ರಾತ್ರಿ ಕಡತ ನಾಶ ಮಾಡಲಾಗಿದೆ ಎಂದು ಉಮೇಶ್ ಅವರು ಡಿಸಿಗೆ ದೂರು ಸಲ್ಲಿಸಿದ್ದಾರೆ.

ಜುಲೈ 7 ರಿಂದ 10ರ ಅವಧಿಯಲ್ಲಿ ಅರಸೀಕೆರೆ ತಾಲೂಕಿನಲ್ಲಿ ಹಬ್ಬನಘಟ್ಟ ಗ್ರಾಮದ ಖಾಸಗಿ ಜಾಗದಲ್ಲಿ ಕಡತಗಳನ್ನು ಸುಟ್ಟು ನಾಶ ಮಾಡಲಾಗಿದೆ ಎಂದು ಉಮೇಶ್ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲು ನಿನ್ನೆ ಡಿಸಿಗೆ ದೂರು ನೀಡಿದ್ದು ಇದೀಗ ಮತ್ತೊಂದು ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಳಕಿಗೆ ಬಂದಿದೆ. ಇದು ಯಾವ ತಿರುವು ಪಡೆದುಕೊಳ್ಳುತ್ತೆ ಎಂದು ಕಾದು ನೋಡಬೇಕಿದೆ.