ಮನೆ ಸ್ಥಳೀಯ ಕೇಂದ್ರ ಬಜೆಟ್: ರೈತರ ಮೂಗಿಗೆ ತುಪ್ಪ ಸವರುವ ಬಜೆಟ್- ಕುರುಬೂರ್ ಶಾಂತಕುಮಾರ್

ಕೇಂದ್ರ ಬಜೆಟ್: ರೈತರ ಮೂಗಿಗೆ ತುಪ್ಪ ಸವರುವ ಬಜೆಟ್- ಕುರುಬೂರ್ ಶಾಂತಕುಮಾರ್

0

ಕೇಂದ್ರ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುದಾನ ಹೆಚ್ಚಳ ಮಾಡಿದ್ದರು ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ದಿಕ್ಕಿನಲ್ಲಿ ಕಾರ್ಯಯೋಜನೆ ಇಲ್ಲ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿ ಮಾಡುವ ಬಗ್ಗೆ ಪ್ರಸ್ತಾಪವಿಲ್ಲ. ಕೃಷಿ ಕ್ಷೇತ್ರ ಶ್ರಮಿಕರ ಕ್ಷೇತ್ರವಾಗಿದೆ ಡಿಜಿಟಲ್ಲಿಕರಣ ಆಹಾರ ಉತ್ಪಾದನೆ ಮಾಡುವುದಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಮರೆತಿದೆ.

Join Our Whatsapp Group

ರೈತರ ಜಮೀನು ಮೌಲ್ಯದ 75 ರಷ್ಟು ಸಾಲ ನೀಡುವ ನೀತಿ. ಜಾರಿಯಾಗಿಲ್ಲ. ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಉಪಯೋಗವಿಲ್ಲ. ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ. ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.