ಮನೆ ರಾಜ್ಯ ಕೆ.ಆರ್.ಎಸ್ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕೆ.ಆರ್.ಎಸ್ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

0

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಧಾರಕಾರ ಮಳೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆ.ಆರ್.ಎಸ್ ಜಲಾಶಯ   ಎರಡು ವರ್ಷಗಳ ಬಳಿಕ ಭರ್ತಿಯಾಗಿದೆ. ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನ ಕಾವೇರಿ ನದಿಗೆ ಹರಿಬಿಡಲಾಗಿದೆ. ಇದರ ನಡುವೆ ಇದೀಗ ಕೆ.ಆರ್.ಎಸ್ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿದೆ.

Join Our Whatsapp Group

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಗೋಡೆ ಕುಸಿದಿದೆ. ನೀರಿನ ರಭಸಕ್ಕೆ ನಗುವನ ತೋಟದ ತಡೆಗೋಡೆ ಕೊಚ್ಚಿಹೋಗಿದೆ. ನೀರು ಬಿಟ್ರೆ ತೋಟಕ್ಕೆ ತೊಂದರೆ ಆಗಬಾರದೆಂದು ಈ ತಡೆಗೋಡೆ ಕಟ್ಟಲಾಗಿತ್ತು. ಇತ್ತೀಚೆಗಷ್ಟೇ ಲಕ್ಷಾಂತರ ರೂ. ವೆಚ್ಚದಲ್ಲಿ ಈ ತಡೆಗೋಡೆ ನಿರ್ಮಿಸಲಾಗಿತ್ತು. ಗೇಟ್​ನಿಂದ ಒಮ್ಮೆಯೇ ಹೆಚ್ಚಿನ ನೀರು ಬಿಟ್ಟಿದ್ದರಿಂದ ಗೋಡೆ ಕುಸಿದಿದೆ. ನಿಧಾನವಾಗಿ ನೀರಿನ ಪ್ರಮಾಣ ಹೆಚ್ಚಿಸಿದ್ರೆ ತೊಂದರೆ ಆಗುತ್ತಿರಲಿಲ್ಲ. ಹೀಗಾಗಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ತಡೆಗೋಡೆ ಕುಸಿದಿದೆ ಎಂದು ಜನರು ಆಕ್ರೋಶ ಹೊರ ಹಾಕಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ಅಧಿಕಾರಿಗಳು, ಸಿಬ್ಬಂದಿಗಳು ಆ ಗೇಟ್ ನ ನೀರು ನಿಲ್ಲಿಸಿದ್ದಾರೆ. ತಕ್ಷಣ ನೀರು ನಿಲ್ಲಿಸದಿದ್ದರೇ ತಡೆಗೋಡೆ ಭಾಗಶಃ ಕೊಚ್ಚಿ ಹೋಗುವ ಅಪಾಯವಿತ್ತು.