ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆಯು ಎರಡು ವರ್ಷಗಳ ಬಳಿಕ ಬುಧವಾರ ಸಂಜೆ ವೇಳೆಗೆ ಭರ್ತಿಯಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯದಲ್ಲಿ ಪ್ರಸಕ್ತ 49.452 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಕೆಆರ್ಎಸ್ ಡ್ಯಾಂ ತುಂಬಿರುವುದು ರಾಜ್ಯದ ಜನತೆಯ ಪಾಲಿಗೆ ಅದರಲ್ಲೂ ಬೆಂಗಳೂರಿನ ಜನತೆಗೆ ಇದಕ್ಕಿಂತ ಖುಷಿಯ ಸಂಗತಿ ಮತ್ತೊಂದಿಲ್ಲ. ಏಕೆಂದರೆ, ಕಳೆದ ವರ್ಷ ಹನಿ ಹನಿ ನೀರಿಗೂ ರಾಜ್ಯ ರಾಜಧಾನಿ ಜನರು ಪರದಾಡಿದ್ದರು. ಎಷ್ಟೋ ಮಂದಿ ನೀರಿಲ್ಲದೆ ಬೆಂಗಳೂರನ್ನೇ ತೊರೆದಿದ್ದರು. ಕಾವೇರಿ ನೀರಿನಲ್ಲಿ ವಾಹನಗಳನ್ನು ಸ್ವಚ್ಛಗೊಳಿಸಿದ್ದಕ್ಕೆ ಬಿಬಿಎಂಪಿ ದಂಡ ವಿಧಿಸಿದ್ದನ್ನು ಮರೆಯುವಂತಿಲ್ಲ. ಒಂದು ಬಿಂದಿಗೆ ನೀರಿಗೂ ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಕಳೆದ ಬೇಸಿಗೆಯಲ್ಲಿ ಎದುರಾಗಿತ್ತು. ಆದರೆ, ಈ ಬಾರಿ ವರುಣ ಕೃಪೆ ತೋರಿದ್ದು, ಕೆಆರ್ಎಸ್ ಡ್ಯಾಂಗೆ ಮತ್ತೆ ಜೀವಕಳೆ ಬಂದಿದೆ. ಅಲ್ಲದೆ, ರೈತರ ಮುಖದಲ್ಲೂ ಮಂದಹಾಸ ಮೂಡಿದೆ.
ಬರದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದ್ದಕ್ಕೆ ಕೆಲವು ತಿಂಗಳುಗಳು ಹಿಂದೆ ರೈತರು ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಯನ್ನು ನಡೆಸಿದ್ದರು. ಬೆಳೆಗೆ ನೀರಿಲ್ಲದೆ ಕಾವೇರಿ ಜಲಾನಯನ ಪ್ರದೇಶದ ರೈತರು ಮೋಡದ ಕಡೆ ಮುಖ ಮಾಡಿ ಯಾವಾಗ ಮಳೆ ಬರುತ್ತದೆ ಎಂದು ಎದುರು ನೋಡುತ್ತಿದ್ದರು. ಆದರೆ, ವರುಣ ತನ್ನ ಮುನಿಸನ್ನು ದೂರ ಮಾಡಿದ್ದು, ಮತ್ತೆ ಕೃಪೆ ತೋರಿದ್ದಾನೆ. ಭಾರಿ ಮಳೆಯಿಂದ ಕೆಆರ್ಎಸ್ ಡ್ಯಾಂ ತುಂಬಿದ್ದು ಜನರ ನೀರಿನ ಬವಣೆ ನೀಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.