ಬೆಂಗಳೂರು: ಪಂಚೆ ಹಾಕಿ ಬಂದಿದ್ದರು ಎಂಬ ಕಾರಣಕ್ಕೆ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಪಂಚೆ ಧರಿಸಿದ್ದ ವ್ಯಕ್ತಿಯನ್ನ ಒಳಗೆ ಬಿಡಲು ನಿರಾಕರಿಸಿದ್ದಕ್ಕಾಗಿ ಮಾಲ್ ಮಾಲೀಕರು ರೈತರ ಬಳಿ ಕ್ಷಮೆ ಕೂಡ ಕೇಳಿದ್ದರು.
ಇದೀಗ ಈ ಘಟನೆ ಬಳಿಕ ಎಚ್ಚೆತ್ತ ಪಾಲಿಕೆ, ಬೆಂಗಳೂರಿನ ಮಾಲ್ ಗಳಿಗೆ ಹೊಸ ನಿಯಮ ರೂಪಿಸಲು ಹೊರಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಒಂದಷ್ಟು ನಿಯಮಗಳನ್ನ ರೆಡಿಮಾಡುತ್ತಿರುವ ಬಿಬಿಎಂಪಿ, ಇನ್ಮುಂದೆ ಮಾಲ್ ಗಳಲ್ಲಿ ಬಟ್ಟೆ, ಜಾತಿ, ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದರೆ ಬಿಸಿ ಮುಟ್ಟಿಸಲು ಮುಂದಾಗಿದೆ.
ಸದ್ಯ ಬೆಂಗಳೂರಿನ ಬಹುತೇಕ ಮಾಲ್ಗಳಲ್ಲಿ ಉಡುಗೆ-ತೊಡುಗೆ ನೋಡಿ ಸಿಬ್ಬಂದಿ ವರ್ತನೆ ಬದಲಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಇನ್ಮುಂದೆ ತಾರತಮ್ಯ ಮಾಡಿದರೆ ಆ ಮಾಲ್ಗಳಲ್ಲಿರುವ ಎಲ್ಲಾ ಅಂಗಡಿಗಳ ಟ್ರೇಡ್ ಲೈಸೆನ್ಸ್ ರದ್ದು ಮಾಡಲು ಸಜ್ಜಾಗಿರುವ ಪಾಲಿಕೆ, ಶೀಘ್ರದಲ್ಲೇ ಆದೇಶ ಹೊರಡಿಸಲು ತಯಾರಿ ನಡೆಸಿದೆ.
ಮಾಲ್ಗಳಿಗೆ ಹೊಸ ನಿಯಮ ರೂಪಿಸುವ ಬಗ್ಗೆ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೂಡ ಮಾಹಿತಿ ನೀಡಿದ್ದಾರೆ.
ಹೊಸ ನಿಯಮದಲ್ಲಿ ಏನೇನಿವೆ?
ಸದ್ಯ ಪಾಲಿಕೆ ಜಾರಿಗೆ ತರಲು ಹೊರಟಿರುವ ನಿಯಮಾವಳಿಗಳಲ್ಲಿ ಯಾವುದೇ ವ್ಯಕ್ತಿಯ ಮಾಲ್ ಪ್ರವೇಶಕ್ಕೆ ಅವಕಾಶ ಕೊಡಬೇಕು, ಕಾಲ ಕಾಲಕ್ಕೆ ಆಸ್ತಿ ತೆರಿಗೆ ಪಾವತಿಸಬೇಕು. ಜೊತೆಗೆ ಯಾರೇ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರಬಾರದು ಎಂಬ ವಿಚಾರಗಳನ್ನು ಅಳವಡಿಸಲಾಗುತ್ತಿದೆ. ಈ ನಿಯಮ ಮೀರಿದರೆ ಅಂತಹ ಮಾಲ್ ಗಳ ವ್ಯಾಪಾರ-ವಹಿವಾಟಿಗೆ ಬ್ರೇಕ್ ಹಾಕಿ ಬಿಸಿ ಮುಟ್ಟಿಸಲು ಯೋಜನೆ ರೂಪಿಸಲಾಗುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.