ಮೈಸೂರು: ನನ್ನಂಥ ರಾಜಕಾರಣಿ ಈ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಯಾರು ಇಲ್ಲ. ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರದ ಮಂತ್ರಿಗಳು ಜವಾಬ್ದಾರಿಯಿಂದ ಇಲಾಖೆ ನಡೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೆಗೌಡ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಜಿ.ಟಿ.ದೇವೇಗೌಡರಿಗೆ ಮಾದಗಳ್ಳಿಯಲ್ಲಿ 1 ಎಕರೆ ಜಾಗ ಕೊಟ್ಟಿದ್ದೇವೆ ಅಂತ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹೇಳಿದ್ದಾರೆ. ನನ್ನ ರಾಜಕೀಯ ಜೀವನ ನಿಮಗೆ ಗೊತ್ತಿಲ್ಲ. ನಾನು ಯಾವುದೇ ಒಂದು ಚೌಲ್ಟ್ರಿ, ಪೆಟ್ರೋಲ್ ಬಂಕ್, ಸ್ಕೂಲ್, ಕಮರ್ಷಿಯಲ್ ಬಿಲ್ಡಿಂಗ್ ಮಾಡಿಲ್ಲ. ನನ್ನ ತಂದೆ 15 ಎಕರೆ ಜಾಗ ಮಾಡಿದ್ದರು. ಪ್ರಗತಿಪರ ರೈತನಾಗಿ ದುಡಿದು ಪಕ್ಕದಲ್ಲಿ ಜಮೀನು ಖರೀದಿ ಮಾಡಿದ್ದೇನೆ. ಸಾಲಗಾರನಾಗಿ ರಾಜಕಾರಣ ಮಾಡುತ್ತಿದ್ದೇನೆ. ಮುಡಾದ ಶೇ.90ರಷ್ಟು ಜಾಗ ಇರೋದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ. ಗೋವಿಂದರಾಜು ಅಧ್ಯಕ್ಷರಾಗಿದ್ದಾಗ ಜಯಲಕ್ಷ್ಮಿಪುರಂ ಬಾಡಿಗೆ ಮನೆಯಲ್ಲಿದ್ದೆ. ಲಾಟರಿಯಲ್ಲಿ 50×80 ಸೈಟ್ ಬಂದಿದೆ. ಅದನ್ನು ಬಿಟ್ಟು ಬೇರೆ ಯಾವುದೇ ಸೈಟ್ ಪಡೆದಿಲ್ಲ. ಮಂತ್ರಿಗಳೇ, ನೀವು ಸರಿಯಾಗಿ ನಡೆದಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಚಿವರು ಎಲ್ಲವನ್ನೂ ಸಮರ್ಪಕವಾಗಿ ಪರಿಶೀಲನೆ ಮಾಡಬೇಕಿತ್ತು. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಮಾಡಬೇಕಿತ್ತು. ಬಡಾವಣೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಮುಡಾ ವಿಫಲವಾಗಿದೆ. ಸ್ಲಂಗಳನ್ನು ಸೃಷ್ಟಿಸಲು ಮುಡಾ ಹೊರಟಿದೆ. ಮುಡಾ ಬಡಾವಣೆಗಳ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ವಿಫಲವಾಗಿದೆ. ಸಚಿವರು ಸತ್ಯಾಂಶ ಬಯಲು ಮಾಡಬೇಕು. ಏಳು ದಿನಗಳಲ್ಲಿ ದಾಖಲೆ ಸಮೇತ ಸಾಬೀತುಪಡಿಸಬೇಕು. ಅದು ಬಿಟ್ಟು ನನ್ನಂತಹ ಪ್ರಾಮಾಣಿಕನಿಗೆ ಏಕೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಶಾಸಕರ ಬಗ್ಗೆಯೂ ತನಿಖೆ ಮಾಡಿಸಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಮಾಡಲಿ.
ಒಂದು ವಾರದೊಳಗೆ ನಗರಾಭಿವೃದ್ಧಿ ಸಚಿವರು ಉತ್ತರ ಕೊಡಬೇಕು. ಇಲ್ಲದಿದ್ದರೇ ನಾನೇ ಅವರಿಗೆ ನೋಟಿಸ್ ಜಾರಿ ಮಾಡುತ್ತೇನೆ. ನನ್ನ ವಿರುದ್ಧ ಮಾಡಿರುವ ಆರೋಪ ಸಾಬೀತು ಮಾಡದಿದ್ದರೆ ಸಚಿವರ ವಿರುದ್ಧ ಕಾನೂನು ಸಮರ ನಡೆಸುತ್ತೇನೆ. ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನಾವು ಇಂತಹವರಿಗೆ ನಿವೇಶನ ಮಂಜೂರು ಮಾಡಿಕೊಡಿ ಎಂದು ಶಿಫಾರಸು ಪತ್ರ ಕೊಟ್ಟಿರುತ್ತೇವೆ. ಇಷ್ಟಕ್ಕೆ ನಮಗೇ ನಿವೇಶನ ಕೊಟ್ಟಿದ್ದೇವೆ ಎಂದು ಆರೋಪ ಮಾಡಿರುವುದು ಸರಿಯಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡ ಕಿಡಿಕಾರಿದ್ದಾರೆ.
ಇನ್ನು ನನ್ನ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಎರಡು ಪತ್ರ ಬರೆದಿದ್ದೇನೆ. ಅದನ್ನೇ ನೆಪ ಮಾಡಿಕೊಂಡು ಸೈಟ್ ಕೊಟ್ಟಿದ್ದೇವೆಂದು ಹೇಳಿದ್ದಾರೆ. ಮುಖಂಡ ಶಿವಮೂರ್ತಿಯವರ ಜಾಗವನ್ನು ಮುಡಾ ಬಳಸಿಕೊಂಡಿತ್ತು. ವೀರನಗೆರೆ ಗ್ರಾಮದ ರೈತನಿಗೂ ಇದೇ ರೀತಿಯ ಸಮಸ್ಯೆ ಆಗಿತ್ತು. ಕಾನೂನಾತ್ಮಕವಾಗಿದ್ದರೆ ಪರಿಹಾರ ಕೊಡಿ ಅಂತ ಪತ್ರ ಬರೆದಿದ್ದೇನೆ. ಮಂತ್ರಿಗಳು ಯಾವುದನ್ನು ಕೂಡ ನೋಡದೇ ಹೇಳಿಕೆ ನೀಡಿದ್ದೀರಿ. ಕಲೆಕ್ಷನ್ ಮಾಡೋಕೆ ಇಟ್ಟುಕೊಂಡವರ ಮಾತುಕೇಳಿ ಹೇಳಿಕೆ ನೀಡಿದ್ದೀರಿ. ನಿಮ್ಮ ತಪ್ಪಿನಿಂದಾಗಿ ಈಗ ಮುಖ್ಯಮಂತ್ರಿಗಳ ತಲೆಗೆ ಬಂದಿದೆ. ಪ್ರಾಧಿಕಾರಗಳು ಸಂಬಳ ಕೊಡಲೂ ಕಾಸಿಲ್ಲದ ಸ್ಥಿತಿಗೆ ಬಂದಿವೆ. ಯುಜಿಡಿ, ನೀರು, ರಸ್ತೆ ಅಭಿವೃದ್ಧಿಗೂ ದುಡ್ಡಿಲ್ಲ ಎಂದರು.
ಇನ್ನು ಇದೇ ವೇಳೆ JDS ಶಾಸಕಾಂಗ ಪಕ್ಷದ ನಾಯಕ ಸ್ಥಾನ ತಪ್ಪಿದಕ್ಕೆ ಜಿಟಿಡಿ ಪ್ರತಿಕ್ರಿಯೆ ನೀಡಿದ್ದು, ಎಲ್ಲರೂ ಒಕ್ಕಲಿಗರೆ ಆಗುತ್ತಾರೆಂದು ಕುರುಬರಿಗೆ ಸ್ಥಾನ ನೀಡಲಾಗಿದೆ. JDLP ನಾಯಕ ಸುರೇಶ್ ಬಾಬು ಅವರನ್ನ ನಾನೇ ಅಭಿನಂದಿಸಿದ್ದೇನೆ. JDLP ನಾಯಕ ಸ್ಥಾನ ತಪ್ಪಿದ್ದಕ್ಕೆ ನನಗೆ ಯಾವುದೇ ಬೇಸರವೂ ಇಲ್ಲ. ನನಗೆ ಯಾಕೆ ತಪ್ಪಿತು ಅಂತಾ ಈಗ ಹೋಗಿ ನಾನು ಕೇಳಲಾಗುತ್ತಾ? ಈಗ ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರು, ದೊಡ್ಡವರು. ಕೇಂದ್ರ ಮಂತ್ರಿಗಳನ್ನು ಯಾಕೆ, ಏನೆಂದು ಪ್ರಶ್ನೆ ಮಾಡಲು ಸಾಧ್ಯವಾ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.