ರಾಯಚೂರು: ದರ್ವೇಶ್ ಗ್ರೂಪ್ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಹಮ್ಮದ್ ಶಾಮೀದ್, ಮೋಸಿನ್, ಅಜರ್ ಅಲಿ ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ತಮಗೆ ಪರಿಚಯವಿದ್ದ ಓರ್ವ ವ್ಯಕ್ತಿಯ ಮನೆಯಲ್ಲಿ 2 ಕೋಟಿ ರೂ. ಹಣ ಇರುವುದಾಗಿ ಬಾಯಿ ಬಿಟ್ಟರು. ಆರೋಪಿಗಳು ಸೂಚಿಸಿರುವ ರಾಯಚೂರು ನಗರದ ಎಲ್.ಬಿ.ಎಸ್ ನಗರದಲ್ಲಿದರುವ ಓರ್ವ ವ್ಯಕ್ತಿಯ ಮನೆಯಲ್ಲಿ ಶೋಧಕಾರ್ಯ ನಡೆಸಿದಾಗ 2 ಕೋಟಿ ರೂ. ಪತ್ತೆಯಾಗಿದೆ.
ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಕಂಪನಿ ಮಾಲೀಕ ಮೊಹಮ್ಮದ್ ಹುಸೇನ್ ಸುಜಾ ನಾಪತ್ತೆಯಾಗಿದ್ದಾನೆ. ಸಿಐಡಿ ಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ಮೊಹಮ್ಮದ್ ಗಾಗಿ ಹುಡುಕಾಟ ನಡೆಸಿದ್ದಾರೆ.
ಏನಿದು ಪ್ರಕರಣ
ನಗರದ ಹೈದರಾಬಾದ್ ರಸ್ತೆಯಲ್ಲಿರುವ ದರ್ವೇಶ್ ಗ್ರೂಪ್ ಕಂಪನಿ 2022ರಿಂದ ಕಾರ್ಯನಿರ್ವಹಿಸುತ್ತಿದೆ. ಮೊಹಮ್ಮದ್ ಹುಸೇನ್ ಸುಜಾ, ಸಯ್ಯದ್ ಮಸ್ಕಿನ್ ಹಾಗೂ ಸಯ್ಯದ್ ಎಂಬುವರು ಈ ಕಂಪನಿ ನಡೆಸುತ್ತಿದ್ದರು. ಕಂಪನಿ ಶೇ10 ಹಾಗೂ 10 ಕ್ಕಿಂತ ಹೆಚ್ಚು ಬಡ್ಡಿ ನೀಡುವುದಾಗಿ ಹೇಳಿ ಜನರಿಂದ ಹಣ ಹೂಡಿಕೆ ಮಾಡಿಸಿಕೊಳ್ಳಲಾಗುತ್ತಿತ್ತು.
ಆಟೋ, ಕ್ಯಾಬ್ ಚಾಲಕರು, ಗಾರೆ ಕೆಲಸದವರು ಹೀಗೆ ಬಡ ವರ್ಗದ ಜನರೇ ಹೆಚ್ಚಾಗಿ ಹೂಡಿಕೆ ಮಾಡಿದ್ದರು. ಕೆಲವೊಬ್ಬರು ಮನೆಯನ್ನ ಅಡವಿಟ್ಟು, ಹಣ ತಂದು ಹೆಚ್ಚಿನ ಬಡ್ಡಿ ಆಸೆಗೆ ಹೂಡಿಕೆ ಮಾಡಿದ್ದಾರೆ. ಆದರೆ, ಕಳೆದ ಕೆಲ ತಿಂಗಳುಗಳಿಂದ ಸರಿಯಾಗಿ ಬಡ್ಡಿ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇದೇ ಹಣಕಾಸಿನ ವಿಚಾರವಾಗಿ ಸೋಮವಾರ ಜು.22 ರಂದು ದರ್ವೇಶ್ ಗ್ರೂಪ್ ಕಚೇರಿಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿತ್ತು. ಕಳೆದ ಕೆಲ ತಿಂಗಳುಗಳಿಂದ ದರ್ವೇಶ್ ಗ್ರೂಪ್ ಹೂಡಿಕೆದಾರರಿಗೆ ಸರಿಯಾಗಿ ಸ್ಪಂಧಿಸುತ್ತಿಲ್ಲವಂತೆ. ಹಣ ಹೂಡಿಕೆ ಮಾಡಿಸಿಕೊಳ್ಳೊವಾಗ ಇದ್ದ ಕಾಳಜಿ, ಇತ್ತೀಚೆಗೆ ಕಂಪನಿಗೆ ಇರಲಿಲ್ಲ. ಕಂಪನಿಯ ಮಾಲಿಕ ಜನರ ಕೈಗೆ ಸಿಗುತ್ತಿಲ್ಲ. ಇತ್ತ ತಿಂಗಳು ತಿಂಗಳು ಬಂದು ಬೀಳುತ್ತಿದ್ದ ಬಡ್ಡಿ ಕೂಡ ಬಂದಿಲ್ಲ.
ಘಟನೆ ಬಗ್ಗೆ ರಾಯಚೂರಿನ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದರ್ವೇಶ್ ಕಂಪನಿಯ ಮಾಲೀಕರಾದ ಮೊಹಮ್ಮದ್ ಹುಸೇನ್ ಸುಜಾ, ಸಯ್ಯದ್ ಮಸ್ಕಿನ್ ಹಾಗೂ ಸಯ್ಯದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.