ತಲೆಮರೆಸಿಕೊಂಡಿದ್ದಾರೆಂದು ಘೋಷಿಸಲಾದ ಆರೋಪಿಗಳ ಆಸ್ತಿ ಆತನಿಗೆ ಸೇರದೆ ಆತ ಅಲ್ಲಿ ಕೇವಲ ವಾಸಿಸುತ್ತಿದ್ದ ಎಂದ ಮಾತ್ರಕ್ಕೆ ಆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸುವಂತಿಲ್ಲ ಎಂದು ಅಲಾಹಾಬಾದ್ ಹೈಕೋರ್ಟ್ ಈಚೆಗೆ ಹೇಳಿದೆ.
ತಲೆಮರೆಸಿಕೊಂಡಿರುವುದಾಗಿ ಘೋಷಿಸಲ್ಪಟ್ಟ ವ್ಯಕ್ತಿ ವಾಸಿಸುತ್ತಿದ್ದ ಎರಡು ಕೊಠಡಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಅವರು ಈ ವಿಚಾರ ತಿಳಿಸಿದ್ದಾರೆ. ಆಸ್ತಿಯು ಆರೋಪಿಯ ತಂದೆಗೆ ಸೇರಿದ್ದಾಗಿತ್ತು.
ಸಿಆರ್ಪಿಸಿ ಸೆಕ್ಷನ್ 83ರ ಒಪ್ರಕಾರ ಪರಾರಿಯಾಗಿರುವ ವ್ಯಕ್ತಿಯ ಆಸ್ತಿಯನ್ನಷ್ಟೇ ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.
ಜುಲೈ 2023ರ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ತಲೆಮರೆಸಿಕೊಂಡಿರುವುದಾಗಿ ಘೋಷಿಸಲ್ಪಟ್ಟ ವ್ಯಕ್ತಿಯ ತಂದೆ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ.
ಮೇಲ್ಮನವಿದಾರ ಫೈಯಾಜ್ ಅಬ್ಬಾಸ್, ಅವರ ಪತ್ನಿ ಗುಡ್ಡೋ ಮತ್ತು ಮಗ ಫೈಜ್ ಅಬ್ಬಾಸ್ 2015ರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಮೇಲ್ಮನವಿದಾರನ ಮಗ (ಫೈಜ್ ಅಬ್ಬಾಸ್) ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕಳೆದ ವರ್ಷ ಆತನನ್ನು ತಲೆಮರೆಸಿಕೊಂಡ ಆರೋಪಿ ಎಂದು ಘೋಷಿಸಿದ್ದ ವಿಚಾರಣಾ ನ್ಯಾಯಾಲಯ ಆತ ತನ್ನ ತಂದೆಯ ಆಸ್ತಿಯಲ್ಲಿ ವಾಸಿಸುತ್ತಿದ್ದ ಎರಡು ಕೊಠಡಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿತ್ತು.
ಆದರೆ ಆದೇಶವನ್ನು ವಿರೋಧಿಸಿದ ಮೇಲ್ಮನವಿದಾರ ತಾನಷ್ಟೇ ಮನೆಯ ಮಾಲೀಕನಾಗಿದ್ದು ತನ್ನ ಮಗ ಫೈಜ್ಗೂ ಈ ಆಸ್ತಿಗೂ ಸಂಬಂಧವಿಲ್ಲ ಎಂದಿದ್ದರು. ವಾದವನ್ನು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಆದರೆ, ಸಿಆರ್ಪಿಸಿ ಸೆಕ್ಷನ್ 83ರ ಅಡಿಯಲ್ಲಿ ತಲೆಮರೆಸಿಕೊಂಡಿರುವುದಾಗಿ ಘೋಷಿಸಲ್ಪಟ್ಟ ವ್ಯಕ್ತಿಯ ಆಸ್ತಿಯನ್ನು ಮಾತ್ರ ಮುಟ್ಟುಗೋಲು ಹಾಕಿಕೊಳ್ಳಬಹುದಾದ್ದರಿಂದ ವಿಚಾರಣಾ ನ್ಯಾಯಾಲಯ ಆಕ್ಷೇಪಣೆಯನ್ನು ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಆರೋಪಿ ವಾಸವಿದ್ದ ಎರಡು ಕೊಠಡಿಗಳನ್ನಷ್ಟೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂಬ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರ ತೀರ್ಪೂ ಅರ್ಥಹೀನ ಎಂದು ಅದು ಕಿವಿ ಹಿಂಡಿತು.
ಈ ಅವಲೋಕನಗಳೊಂದಿಗೆ ಮೇಲ್ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ಮುಟ್ಟುಗೋಲು ಆದೇಶವನ್ನು ರದ್ದುಗೊಳಿಸಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.