ಕಲಬುರಗಿ: ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಕಾಪಾಡಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಕಲಬುರಗಿಯ ಆಲಮೇಲ ತಾಲೂಕಿನ ದೇವಣಗಾಂವ್ ಬಳಿಯ ಅಫಜಲಪುರ-ದೇವಣಗಾಂವ್ ಬ್ರೀಡ್ಜ್ ಬಳಿ ನಡೆದಿದೆ.
ಶಿವು ಹಾಗೂ ರಾಜು ಮೃತ ದುರ್ದೈವಿಗಳು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೃತ ಶಿವು ಪತ್ನಿ ಲಕ್ಷ್ಮಿ ಮಂಗಳವಾರ ಸಂಜೆ ಅಫಜಲಪುರ-ದೇವಣಗಾಂವ್ ಬ್ರೀಡ್ಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಕ್ಷ್ಮಿಯನ್ನು ಉಳಿಸಲು ಪತಿ ಶಿವು ಹಾಗು ಆತನ ಸಂಬಂಧಿ ನದಿಗೆ ಹಾರಿದ್ದಾರೆ.
ಕೂಡಲೆ ಮೀನುಗಾರರು ನದಿಗೆ ಹಾರಿದ್ದು, ಲಕ್ಷ್ಮಿಯನ್ನು ಕಾಪಾಡಿದ್ದಾರೆ. ಆದರೆ, ಲಕ್ಷ್ಮಿ ಪತಿ ಶಿವು ಮತ್ತು ಆತನ ಸಂಬಂಧಿ ಭೀಮಾ ನದಿ ಪಾಲಾಗಿದ್ದಾರೆ. ಭೀಮಾ ನದಿಯಲ್ಲಿ ಮೃತ ಶಿವು ಹಾಗೂ ರಾಜು ಮುಳುಗುವ ದೃಶ್ಯ ಸ್ಥಳೀಯರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.
ವಿಚಾರ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿಗಳು ಮತ್ತು ಅಫಜಲಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಸತತ ಕಾರ್ಯಾಚರಣೆ ನಡೆಸಿ, ಶಿವು ಮತ್ತು ರಾಜುವಿನ ಮೃತದೇಹಗಳು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವಣಗಾಂವ್ ಬ್ರಿಡ್ಜ್ ಬಳಿ ಪತ್ತೆ ಹಚ್ಚಿದ್ದಾರೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.