ಮನೆ ರಾಜ್ಯ ಶಾಸಕ ಟಿ.ರಘುಮೂರ್ತಿ ಕಾರು ಅಪಘಾತ: ಅಪಾಯದಿಂದ ಪಾರು

ಶಾಸಕ ಟಿ.ರಘುಮೂರ್ತಿ ಕಾರು ಅಪಘಾತ: ಅಪಾಯದಿಂದ ಪಾರು

0

ಹಿರಿಯೂರು (Hiriyur)- ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ (T.Raghumurthy) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ.

ಶಾಸಕರು ಮಂಗಳವಾರ ರಾತ್ರಿ ಚಳ್ಳಕೆರೆ ಕಡೆಯಿಂದ ಮಸ್ಕಲ್ ಗೊಲ್ಲರಹಟ್ಟಿಯ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಮಸ್ಕಲ್ ಗ್ರಾಮದಿಂದ ಮದುವೆಗೆ ಹೊರಟಿದ್ದ ಮಹೀಂದ್ರಾ ಜೈಲೋ ಕಾರು ಹಾಗೂ ಶಾಸಕರ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಏರ್ ಬ್ಯಾಗ್ ತೆರೆದುಕೊಂಡಿದ್ದು, ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ಎರಡೂ ಕಾರಿನ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ನನ್ನ ಕಾರು ಸಣ್ಣ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ನಾನು ಮತ್ತು ನನ್ನ ಸಿಬ್ಬಂದ್ದಿ ಹಾಗೂ ಅಪಘಾತಕ್ಕೀಡಾದ ಮತ್ತೊಂದು ಕಾರಿನ ಪ್ರಯಾಣಿಕರು ಸುರಕ್ಷಿತವಾಗಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಟಿ.ರಘುಮೂರ್ತಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.