ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ. ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂಗೆ ಬಿಸಿ ಮುಟ್ಟಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಆದರೆ ಈ ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಯಾರೊಬ್ಬರೂ ಭಾಗಿಯಾಗುವುದಿಲ್ಲ ತಿಳಿಸಿದ್ದರು.
ಆದರೆ ಇದೀಗ ಹೆಚ್ಡಿಕೆ ಜೊತೆ ಚರ್ಚೆ ನಡೆಸಿರುವ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಮನವೊಲಿಸಿದ್ದಾರೆ. ಸದ್ಯ ಒಂದೇ ಒಂದು ಷರತ್ತನ್ನು ಮುಂದೆ ಇಟ್ಟು ಪಾದಯಾತ್ರೆಗೆ ಬರುವಂತೆ ಹೆಚ್ಡಿಕೆ ತಿಳಿಸಿದ್ದಾರೆ.
ಭಾನುವಾರ ನಡೆದಿದ್ದ ಮೈತ್ರಿ ಸಭೆಯಲ್ಲೇ ಹೆಚ್ಡಿ ಕುಮಾರಸ್ವಾಮಿ ಅಸಮಾಧಾನಗೊಂಡಿದ್ದರು. ಬಿಜೆಪಿ-ಜೆಡಿಎಸ್ ಕೋರ್ ಕಮಿಟಿ ಸಮನ್ವಯ ಸಭೆ ಎಂದು ಸಭೆ ನಿಗದಿ ಮಾಡಲಾಗಿತ್ತು. ಆದರೆ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ ಮತ್ತು ಪಿ. ರಾಜೀವ್ ಹಾಜರಿದ್ರು. ಬಿಜೆಪಿ ಕೋರ್ ಕಮಿಟಿ ಸದಸ್ಯರಲ್ಲದ ಪ್ರೀತಂ ಮತ್ತು ರಾಜೀವ್ ಉಪಸ್ಥಿತಿಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ರು.
ದೇವೇಗೌಡರ ಕುಟುಂಬ ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆ ಕರೆಯುತ್ತೀರಾ? ಪೆನ್ ಡ್ರೈವ್ ಹಂಚಿದೋರು ಯಾರು ಅಂಥ ಗೊತ್ತಿಲ್ವಾ? ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದು ಕಿಡಿಕಾರಿದ್ದರು. ಬಳಿಕ ಬಿಜೆಪಿ ಪಾದಯಾತ್ರೆಯಲ್ಲಿ ಜೆಡಿಎಸ್ನ ಯಾವ ಸದಸ್ಯರೂ ಹೋಗದಂತೆ ಜೆ.ಟಿ ದೇವೇಗೌಡರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ಸದ್ಯ ಮೈತ್ರಿ ಪಕ್ಷದಲ್ಲಿ ಗೊಂದಲ ವ್ಯಕ್ತವಾದ ಹಿನ್ನೆಲೆ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಹೆಚ್ಡಿ ಕುಮಾರಸ್ವಾಮಿ ಅವರ ಮನವೊಲಿಸಲು ಪ್ರಯತ್ನಿಸಿದ್ದು ಈ ವೇಳೆ ಹೆಚ್ಡಿಕೆ ಒಂದು ಷರತ್ತು ಇಟ್ಟಿದ್ದಾರೆ. ಪ್ರೀತಂಗೌಡ ಪಾದಯಾತ್ರೆಯಲ್ಲಿ ಇರಬಾರದು. ಹಾಗಿದ್ದಾಗ ಮಾತ್ರ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗುತ್ತೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೆ ಹೆಚ್ಡಿಕೆ ಷರತ್ತು ಹಾಕಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.
ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಬೆಂಬಲ ಕೊಡಬೇಕು? ಪ್ರೀತಂಗೌಡ ಯಾರು? ಪೆನ್ ಡ್ರೈವ್ ಹಂಚಿಕೆಗೆ ಯಾರು ಕಾರಣ ಅನ್ನೋದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಆತ. ಅಂತವರ ಜೊತೆಗೆ ವೇದಿಕೆ ಮೇಲೆ ಕೂರಲು ಸಾಧ್ಯವಿಲ್ಲ. ನಮ್ಮ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ವಿರುದ್ಧ ತೀರ್ಮಾನವಾಗಿದೆ ಎಂದು ಈ ಹಿಂದೆ ಹೆಚ್ಡಿಕೆ ಆಕ್ರೋಶ ಹೊರ ಹಾಕಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.