ಮನೆ ಅಪರಾಧ ಶಿಡ್ಲಘಟ್ಟ: ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ

ಶಿಡ್ಲಘಟ್ಟ: ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ

0

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ರೈಲ್ವೆ ಹಳಿಗೆ ಅಣ್ಣ ತಂಗಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

Join Our Whatsapp Group

ಶಿಡ್ಲಘಟ್ಟ ಟೌನ್ ನ ಪ್ರೇಮನಗರದ ನಿವಾಸಿಗಳಾದ ಶಿಲ್ಪ ಅಲಿಯಾಸ್ ನವ್ಯ (23) ಹಾಗೂ ಪ್ರಭು (20) ಎನ್ನಲಾಗಿದ್ದು ಬಲಜಿಗ ಜನಾಂಗದವರು ಎನ್ನಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ.

ತಾಯಿ ಲಲಿತಮ್ಮ ನಾಲ್ಕು ತಿಂಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದು ಮಕ್ಕಳಿಗೆ ತಾಯಿಯೇ ಎಲ್ಲಾ ಆಗಿದ್ದಳು, ಇದೇ ಕಾರಣಕ್ಕೆ ಮಕ್ಕಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ತನಿಖೆಯಿಂದ ನಿಜಾಂಶ ಗೊತ್ತಾಗಬೇಕಿದೆ.