ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ ಹಾಗೂ ಹಜಾರಿಬಾಗ್ಗೆ ಮಾತ್ರ ಸೀಮಿತವಾಗಿತ್ತು ಹೀಗಾಗಿ ನೀಟ್ ಯುಜಿ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಆದರೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರವನ್ನು ಇಲ್ಲಿಗೇ ಬಿಡಲು ಸಾಧ್ಯವಿಲ್ಲ, ಹಾಗಾಗಿ ಉದ್ಭವಿಸಿರುವ ಸಮಸ್ಯೆಗಳನ್ನು ಕೇಂದ್ರ ಈ ವರ್ಷವೇ ಸರಿಪಡಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ನಾವು ರಚನಾತ್ಮಕ ನ್ಯೂನತೆಗಳ ಬಗ್ಗೆ ಗಮನಹರಿಸಿದ್ದೇವೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಗುರುತನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪೇಪರ್ ಸೋರಿಕೆಯನ್ನು ತಡೆಗಟ್ಟಲು ಎಸ್ಒಪಿ ಸಿದ್ಧಪಡಿಸುವುದು ಸರ್ಕಾರ ಹಾಗೂ ಎನ್ಟಿಎ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಸುಪ್ರೀಂಕೋರ್ಟ್ನ ತೀರ್ಪಿನಿಂದ ಯಾರೊಬ್ಬರ ದೂರು ಪರಿಹಾರವಾಗಿಲ್ಲವೆನಿಸಿದರೆ ಅವರು ಹೈಕೋರ್ಟ್ಗೆ ಹೋಗಬಹುದು. ಪೇಪರ್ ಸೋರಿಕೆ ವ್ಯವಸ್ಥಿತವಾಗಿಲ್ಲ ಎಂಬುದು ನಮ್ಮ ತೀರ್ಮಾನ. ಪೇಪರ್ ಸೋರಿಕೆ ದೊಡ್ಡ ಪ್ರಮಾಣದಲ್ಲಿ ನಡೆದಿಲ್ಲ ಎಂದು ಕೋರ್ಟ್ ಹೇಳಿದೆ. ನೀಟ್ ಮರುಪರೀಕ್ಷೆಯ ಬೇಡಿಕೆಯನ್ನು ನಾವು ತಿರಸ್ಕರಿಸುತ್ತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.
ವಿಚಾರಣೆ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಧಾನ ಬದಲಿಸುವಂತೆ ನ್ಯಾಯಾಲಯವು ಎನ್ಟಿಎಗೆ ಕೇಳಿದೆ. ಪ್ರಶ್ನೆ ಪತ್ರಿಕೆಯನ್ನು ಹೊಂದಿಸುವ ಸಮಯದಿಂದ ಪರೀಕ್ಷೆ ಮುಗಿಯುವವರೆಗೆ ಸಂಸ್ಥೆಯು ಕಠಿಣ ತನಿಖೆ ನಡೆಸಬೇಕು. ತೆರೆದ ಈ ರಿಕ್ಷಾ ಬದಲಿಗೆ ಲಾಕ್ ಮಾಡಿರುವ ವಾಹನದಲ್ಲೇ ಪ್ರಶ್ನೆಪತ್ರಿಕೆ ಕೊಂಡೊಯ್ಯಬೇಕು. ಎಲೆಕ್ಟ್ರಾನಿಕ್ ಫಿಂಗರ್ಪ್ರಿಂಟ್ಗಳ ರೆಕಾರ್ಡಿಂಗ್ ಮತ್ತು ಸೈಬರ್ ಭದ್ರತೆಗೆ ವ್ಯವಸ್ಥೆ ಮಾಡಿ ಇದರಿಂದ ಡೇಟಾವನ್ನು ಸುರಕ್ಷಿತವಾಗಿರಿಸಿಕೊಳ್ಳಬಹುದು.
ನೀಟ್ ಪೇಪಟ್ ಸೋರಿಕೆ ಪ್ರಕರಣವನ್ನು ಸಿಬಿಐ ಮತ್ತು ಇಒಯು ನಡೆಸಿತ್ತು. ಈ ತನಿಖೆಯ ಸಮಯದಲ್ಲಿ ಅನೇಕ ಆರೋಪಿಗಳನ್ನು ಬಂಧಿಸಲಾಗಿತ್ತು. ಜಾರ್ಖಂಡ್ನ ಹಜಾರಿಬಾಗ್ ಮತ್ತು ಪಾಟ್ನಾದಿಂದ ಪತ್ರಿಕೆ ಸೋರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸಿತು. ಸಿಬಿಐ ಮೊದಲು ದಾಖಲಿಸಿದ್ದ ಎಫ್ಐಆರ್ನಲ್ಲಿ ಎಂಟು ಆರೋಪಿಗಳ ಹೆಸರಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.