ಮನೆ ಸ್ಥಳೀಯ ಅಹಿಂದ ವರ್ಗಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಬಿ.ವೈ ವಿಜಯೇಂದ್ರ

ಅಹಿಂದ ವರ್ಗಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಬಿ.ವೈ ವಿಜಯೇಂದ್ರ

0

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಹಿಂದಾ ಹೆಸರು ಹೇಳಿ ಅಧಿಕಾರ ಹಿಡಿದಿದೆ. ಆದರೆ ಅಹಿಂದ ವರ್ಗಕ್ಕೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

Join Our Whatsapp Group

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ತುಳಿತಕ್ಕೆ ಒಳಗಾದ ವರ್ಗಕ್ಕೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಮೂಡಾ, ವಾಲ್ಮೀಕಿ ಹಗರಣ, SCPTSP ಹಣ ದುರ್ಬಳಕೆ ಸೇರಿದಂತೆ ಹಲವು ವಿಚಾರ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿರುವುದಾಗಿ ತಿಳಿಸಿದರು.

ವಿಜಯೇಂದ್ರ ವಿರುದ್ಧ ಡಿಕೆಶಿ ಏಕವಚನ ಪದಪ್ರಯೋಗ ವಿಚಾರವಾಗಿ ಮಾತನಾಡಿ, ಅಧಿಕಾರ ಬಂದಾಗ ಕಾಂಗ್ರೆಸ್‌ ನವರಿಗೆ ಈ ರೀತಿ ಆಗುತ್ತೆ. ಅದರ ಬಗ್ಗೆ ನಾನು ಮಾತನಾಡಲ್ಲ. ಪಾದಯಾತ್ರೆ ಮೊಟಕಾಗುವ ಪ್ರಶ್ನೆ ಇಲ್ಲ. ಕಾಂಗ್ರೆಸ್‌ನವರದ್ದು ಪಶ್ಚಾತ್ತಾಪದ ಯಾತ್ರೆ. ಕೊಟ್ಟ ಭರವಸೆ ಈಡೇರಿಸಲು ಆಗಲಿಲ್ಲ ಎಂಬ ಪಶ್ಚಾತ್ತಾಪದಲ್ಲಿ   ಕಾರ್ಯಕ್ರಮ ಮಾಡ್ತಿದ್ದಾರೆ. ತಮ್ಮ ಭ್ರಷ್ಟಾಚಾರ ಸಮರ್ಥನೆಗೆ ಸರ್ಕಾರವೇ ಇಳಿದಿದೆ ಎಂದರು.