ಮನೆ ಕಾನೂನು ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣ ​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣ ​: ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

0

ಬೆಂಗಳೂರು: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್​ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು  ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ.

Join Our Whatsapp Group

ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಇನ್ನು ಸೈಬರ್​ ಠಾಣೆ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಿಎಸ್​​ಐ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.