ಮನೆ ರಾಜಕೀಯ 82 ವರ್ಷ ವಯಸ್ಸಿನಲ್ಲಿ ಬೇಕಿತ್ತಾ?: ಬಿಎಸ್ ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

82 ವರ್ಷ ವಯಸ್ಸಿನಲ್ಲಿ ಬೇಕಿತ್ತಾ?: ಬಿಎಸ್ ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

0

ಮೈಸೂರು: ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಬುಧವಾರ (ಆಗಸ್ಟ್ 7) ಕಿಡಿ ಕಾರಿದ್ದಾರೆ.

Join Our Whatsapp Group

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ’ ಎನ್ನುವ ಹೇಳಿಕೆ ಕುರಿತು ಕಿಡಿಕಾರಿ, ”ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ಇದೆ. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು.82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ? ನನ್ನ ಬಗ್ಗೆ ಮಾತನಾಡುವುದ್ದಕ್ಕೆ ಯಡಿಯೂರಪ್ಪ ಅವರಿಗೆ ಯಾವ ನೈತಿಕತೆ ಇದೆ? ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು’ ಎಂದು ಕಿಡಿ ಕಾರಿದರು.

ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ, ಇದೇ ಬೇರೆ. ಯಡಿಯೂರಪ್ಪ ಡಿನೋಟಿಫೈ ಮಾಡಿದ್ದರು., ಚೆಕ್ ಮೂಲಕ ಹಣ ಪಡೆದಿದ್ದರು.ಇಲ್ಲಿ ನಾನು ಯಾವುದೇ ಹಣ ಪಡೆದಿಲ್ಲ, ಪ್ರಭಾವ ಬೀರಿಲ್ಲ ಎಂದರು.

ಇಂದು ಬೇಡ ಮೈಸೂರು ಸಮಾವೇಶದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯ ಎಲ್ಲ ಹಗರಣಗಳನ್ನ ಬಿಚ್ಚಿಡುತ್ತೇನೆ.ಜೆಡಿಎಸ್- ಬಿಜೆಪಿ ಏನೆಲ್ಲ ಹಗರಣಗಳನ್ನ ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ ಎಂದು ಕಿಡಿ ಕಾರಿದರು.