ಮೈಸೂರು: ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಬುಧವಾರ (ಆಗಸ್ಟ್ 7) ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ’ ಎನ್ನುವ ಹೇಳಿಕೆ ಕುರಿತು ಕಿಡಿಕಾರಿ, ”ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ಇದೆ. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು.82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ? ನನ್ನ ಬಗ್ಗೆ ಮಾತನಾಡುವುದ್ದಕ್ಕೆ ಯಡಿಯೂರಪ್ಪ ಅವರಿಗೆ ಯಾವ ನೈತಿಕತೆ ಇದೆ? ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು’ ಎಂದು ಕಿಡಿ ಕಾರಿದರು.
ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ, ಇದೇ ಬೇರೆ. ಯಡಿಯೂರಪ್ಪ ಡಿನೋಟಿಫೈ ಮಾಡಿದ್ದರು., ಚೆಕ್ ಮೂಲಕ ಹಣ ಪಡೆದಿದ್ದರು.ಇಲ್ಲಿ ನಾನು ಯಾವುದೇ ಹಣ ಪಡೆದಿಲ್ಲ, ಪ್ರಭಾವ ಬೀರಿಲ್ಲ ಎಂದರು.
ಇಂದು ಬೇಡ ಮೈಸೂರು ಸಮಾವೇಶದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯ ಎಲ್ಲ ಹಗರಣಗಳನ್ನ ಬಿಚ್ಚಿಡುತ್ತೇನೆ.ಜೆಡಿಎಸ್- ಬಿಜೆಪಿ ಏನೆಲ್ಲ ಹಗರಣಗಳನ್ನ ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ ಎಂದು ಕಿಡಿ ಕಾರಿದರು.
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
ಬೀಜಗಳಿಂದ ತಯಾರಾದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ
ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಅಧಿಕಾರಿ ಶ್ರೇಣಿ ಹುದ್ದೆಗಳ ಭರ್ತಿ
ಪ್ಲಾಸ್ಟಿಕ್ ಬಾಟಲ್ ಗಳಿಂದ ಆರೋಗ್ಯಕ್ಕೆ ಮಾರಕ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.