ಮನೆ ರಾಜಕೀಯ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಈ ಬಾರಿ ನಮ್ಮ ಅಭ್ಯರ್ಥಿ ಗೆಲುವು ಖಚಿತ- ಸಿದ್ದರಾಮಯ್ಯ

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಈ ಬಾರಿ ನಮ್ಮ ಅಭ್ಯರ್ಥಿ ಗೆಲುವು ಖಚಿತ- ಸಿದ್ದರಾಮಯ್ಯ

0

ಮೈಸೂರು(Mysuru):   ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಕಾಂಗ್ರೆಸ್ ಅಭ್ಯರ್ಥಿ ಮಧು  ಜಿ ಮಾದೇಗೌಡ ಅವರು ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಬಾರಿ ನಮ್ಮ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ. ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರ ನಮ್ಮ ಅಭ್ಯರ್ಥಿ ಗೆಲುವಿಗೆ ಪೂರಕವಾಗುತ್ತೆ‌ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಮತದಾರರು ಎಲ್ಲರೂ ಪದವೀಧರು. ಈ ಬಾರಿ ಕಾಂಗ್ರೆಸ್ ಪಕ್ಷ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ನಮ್ಮ ಅಭ್ಯರ್ಥಿ ಮಧು ಮಾದೇಗೌಡರನ್ನು ಮುಂಚಿತವಾಗಿ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಈ ಹಿಂದೆ ಮದ್ದೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಅವರ ತಂದೆ ಮಾದೇಗೌಡ 6 ಬಾರಿ ಎಂಎಲ್ ಎ, ಸಂಸದರು ಆಗಿದ್ದರು. ಗ್ರಾಮೀಣ ಭಾಗದ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ಧವರು. ಕೊನೇ ಉಸಿರಿರುವವರೆಗೂ ಜನರಿಗಾಗಿ ಹೋರಾಟ ಮಾಡಿದರು. ಪ್ರಾಮಾಣಿಕತೆ ಬದ್ಧತೆ ಇದ್ದಂತವರು ಎಂದರು.

ಈ ದೇಶ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಸರ್ವತೋಮುಖ ಅಭಿವೃದ್ಧಿ ಈ ದೇಶ ಕಂಡಿದೆ ಎಂದರೆ ಅದು ಕಾಂಗ್ರೆಸ್ ನಿಂದ ಬಿಜೆಪಿಯಿಂದ ಅಲ್ಲ. ಸುಳ್ಳು ಹೇಳಿಕೊಂಡು ಅಧಿಕಾರ ಬಿಜೆಪಿ ಬಂದಿದೆ. ದೇಶದಲ್ಲಿ ಅಶಾಂತಿ, ಬೆಲೆ ಏರಿಕೆ, ಬಡತನ ಹೆಚ್ಚಾಗಿದ್ರೆ, ಅಲ್ಪಸಂಖ್ಯಾತರು ಕಷ್ಟದಲ್ಲಿ ಇದ್ದರೆ ಅದಕ್ಕೆ ಬಿಜೆಪಿ ಕಾರಣ. ಈಗ ಪೆಟ್ರೋಲ್,ಡಿಸೇಲ್ ಗ್ಯಾಸ್ ಬೆಲೆ ಹೆಚ್ಚಾಗಿದೆ. ವಿದ್ಯಾವಂತ ಮತದಾರರಿಗೆ ಇವೆಲ್ಲವೂ ಗೊತ್ತಿದೆ. ಮತದಾರನ್ನು ವೈಯಕ್ತಿಕವಾಗಿ ಭೇಟಿ ಮಾಡಿ. ಮೈಸೂರು ನಗರದವರು ಹೆಚ್ವು ಕೆಲಸ ಮಾಡಬೇಕು. ಮೈಸೂರು ಜಿಲ್ಲೆಯ ಹೆಚ್ವಿನ ಮತಗಳು ಇವೆ. ಮನೆ ಬಾಗಿಲಿಗೆ ತೆರಳಿ ಬಿಜೆಪಿ ಭ್ರಷ್ಟಾಚಾರ, ನಿಷ್ಕ್ರಿಯತೆ, ಬೆಲೆ ಏರಿಕೆ ಇವೆಲ್ಲವನ್ನು ಮತದಾರರಿಗೆ ತಿಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ನಾನು ಜೆಡಿಎಸ್ ಬಗ್ಗೆ ಮಾತನಾಡಲ್ಲ. ಜೆಡಿಎಸ್ ಗೆಲ್ಲುವುದಿಲ್ಲ ಎಂದು ಗೊತ್ತಿದೆ. ಅದಕ್ಕೆ ಶ್ರೀಕಂಠೆಗೌಡ ಸ್ಪರ್ಧೆ ಮಾಡಲಿಲ್ಲ. ಮಂಡ್ಯದಲ್ಲಿ 7 ಜೆಡಿಎಸ್ ಎಂಎಲ್ ಎ ಇದ್ರೂ ಗೂಳಿಗೌಡ ಮಂಡ್ಯದಲ್ಲಿ ಗೆದ್ದಿದ್ದಾರೆ. ನೀವು ಕೆಲಸ ಸರಿಯಾಗಿ ಮಾಡಿದ್ರೆ ಮಧು ಮಾದೇಗೌಡ ನೂರಕ್ಕೆ ನೂರು ಗೆದ್ದೇ ಗೆಲ್ತಾರೆ. ನೀವೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಿ ಎಂದು ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕರೆ‌ ನೀಡಿದರು.