ರಬಕವಿ-ಬನಹಟ್ಟಿ : ಬನಹಟ್ಟಿಯ ಸರ್ವೆ ನಂ. 7 ರಲ್ಲಿ ಅನಧಿಕೃತವಾಗಿ ಅರಣ್ಯ ಇಲಾಖೆಯ ಜಾಗದಲ್ಲಿ ನಿರ್ಮಿಸಿ ಕೊಂಡಿದ್ದ ಶೆಡ್ ಗಳ ತೆರವು ಕಾರ್ಯಾಚರಣೆ ಗುರುವಾರ ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ನಡೆಯಿತು.
ಬನಹಟ್ಟಿಯ ಸರ್ವೆ ನಂ. 7 ಗುಂಡಯ್ಯನ ಮಠದ ಹತ್ತಿರ ವಿರುವ ಅರಣ್ಯ ಇಲಾಖೆಯ ಜಾಗದಲ್ಲಿ ಅನಧಿಕೃತವಾಗಿ ಹಾಕಿದ್ದ ಸೆಡ್ ಗಳನ್ನು ತೆರವುಗೋಳಿಸಲು ಅರಣ್ಯ ಇಲಾಖೆ ಕಳೆದ ತಿಂಗಳು ನೋಟಿಸ್ ನೀಡಿತ್ತು. ಆದರೆ ಅದಕ್ಕೆ ಸ್ಪಂದಿಸದ ಹಿನ್ನಲೆಯಲ್ಲಿ ಇಂದು ಗುರುವಾರ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, ಭೂಮಾಪನಾ ಇಲಾಖೆ ಇವರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ನಂತರ ಅಲ್ಲಿ ಅರಣ್ಯ ಇಲಾಖೆಯವತಿಯಿಂದ ನೂರಾರು ಗಿಡಗಳನ್ನು ನೇಡಲಾಯಿತು.
ಜಮಖಂಡಿ ವಲಯ ಅರಣ್ಯ ಅಧಿಕಾರಿ ಪವನ ಕುರನಿಂಗ, ಎಸಿಎಪ್ ಅಮೃತ ಗುಂಡೋಸಿ , ಉಪವಲಯ ಅರಣ್ಯಾಧಿಕಾರಿ ಮಲ್ಲು ನಾವ್ಹಿ, ರಬಕವಿ-ಬನಹಟ್ಟಿ ಪ್ರಭಾರ ತಹಶೀಲ್ದಾರ ವಿಜಯಕುಮಾರ ಕಡಕೋಳ, ಡಿವೈ ಎಸ್ಪಿ ಈ. ಶಾಂತವೀರ, ಬನಹಟ್ಟಿ ಸಿಪಿಐ ಸಂಜೀವ ಬಳಗಾರ, ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಬನಹಟ್ಟಿ ಪಿಎಸ್ಐ ಶಾಂತಾ ಹಳ್ಳಿ, ವಿಜಯ ಕಾಂಬಳೆ, ತೇರದಾಳ ಪಿಎಸ್ಐ ಅಪ್ಪಣ್ಣ ಐಗಳಿ, ಪುರಂದರ ಪೂಜಾರಿ, ಲೋಕಾಪೂರ ಪಿಎಸ್ಐ ಕಾಡು ಜಕ್ಕನ್ನವರ, ಮಹಾಲಿಂಗಪುರ ಪಿಎಸ್ಐ ಕಿರಣ ಸತ್ತಿಗೇರಿ, ಕಂದಾಯ ನೀರಿಕ್ಷಕರಾದ ಪ್ರಕಾಶ ಮಠಪತಿ, ತಾಲೂಕು ಭೂಮಾಪಕರು ಏಕನಾಥ ಮುಂಡಾಸ, ಗ್ರಾಮ ಆಡಳಿತಾಧಿಕಾರಿ ಸದಾಶಿವ ಕುಂಬಾರ ವಲಯ ಬೀಳಗಿ, ಮುಧೋಳ, ಜಮಖಂಡಿ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳು ಇದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.