ಬೆಂಗಳೂರು: ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಗುರುವಾರ(ಆ.8ರಂದು) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆಂಧ್ರ ಪ್ರದೇಶದ ಡಿಸಿಎಂ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಆಂಧ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವರೂ ಆಗಿರುವ ಪವನ್ ಕಲ್ಯಾಣ್ ಅವರು, ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಆನೆ ಹಾವಳಿ ತಡೆಗಟ್ಟುವ ಸಂಬಂಧ ನಡೆಯಲಿರುವ ಸಭೆಯಲ್ಲಿ ಅವರು ಭಾಗಿಯಾಗಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಆಗಿದ್ದಾರೆ.
ಈ ವೇಳೆ ಸಿಎಂ ಜೊತೆ ಸಚಿವ ಜಮೀರ್ ಅಹಮದ್ ಹಾಗೂ ಇತರರು ಉಪಸ್ಥಿತರಿದ್ದರು.
ವಿಧಾನಸಭೆಗೆ ಬರುತ್ತಿದ್ದಂತೆ ಅವರೊಂದಿಗೆ ಫೋಟೋ ಕ್ಲಿಕ್ಕಿಸಲು ಸಿಬ್ಬಂದಿಗಳು , ಸರ್ಕಾರಿ ನೌಕರರು ಮುಗಿಬಿದ್ದ ದೃಶ್ಯ ಕಂಡುಬಂತು.
ಆಗಸ್ಟ್ 12 ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ. ಇದರಲ್ಲಿ ಆನೆ ಹಾವಳಿ ತಪ್ಪಿಸಲು ಇರುವ ಪರಿಹಾರ ಮಾರ್ಗದ ಬಗ್ಗೆ ಚರ್ಚೆ ನಡೆಯಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.