ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿದೆ.
ಕಾರ್ಯಕ್ರಮವು ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳ ಕಚೇರಿಯಲ್ಲಿ, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಹಾಗೂ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ತಾಲ್ಲೂಕು ಕಚೇರಿಯಲ್ಲಿ ನಡೆಯಲಿದೆ.
ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ದೂರು ನೀಡಿ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕ್ಷರಾದ ಸುರೇಶ್ ಬಾಬು ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.