ಮನೆ ಅಪರಾಧ ಮಹಾಲಿಂಗಪುರ: ಒಂದೇ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ

ಮಹಾಲಿಂಗಪುರ: ಒಂದೇ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ

0

ಮಹಾಲಿಂಗಪುರ: ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರೀಯಾ ಮಲ್ಲಪ್ಪ ಮಡಿವಾಳ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಹಾಲುಮತ ಸಮಾಜದ ಯುವಕ, ಲಿಂಗಾಯತ (ಅಗಸರ) ಸಮಾಜದ ಯುವತಿ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಾಗ ಗ್ರಾಮದ ಹಿರಿಯರು ಇಬ್ಬರಿಗೂ ಬೈದು ಬುದ್ದಿವಾದ ಹೇಳಿದ್ದರು ಎಂದು ತಿಳಿದು ಬಂದಿದೆ.

ಶುಕ್ರವಾರ ಮುಂಜಾನೆ ಏಕಾಏಕಿ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿನಲ್ಲೂ ಒಂದಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಇವರ ಆತ್ಮಹತ್ಯೆಗೆ ಅಂತರ್ಜಾತಿ ವ್ಯವಸ್ಥೆ ಕಾರಣವೋ?‌ ಅಥವಾ ಕುಟುಂಬಸ್ಥರ ವಿರೋಧವೋ? ಎಂಬುದು ಪೊಲೀಸರ ತನಿಖೆಯ ಬಳಿಕವಷ್ಟೇ ನಿಖರ ಕಾರಣ ತಿಳಿಯಬೇಕಾಗಿದೆ.

ಮಹಾಲಿಂಗಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.