ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರಬಂದಿದೆ.
ಆಗಸ್ಟ್ 6ರಂದು ಸಿಸೋಡಿಯಾ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿತ್ತು. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್ ಸಿಸೋಡಿಯಾ ಹೊರಬರಲಿದ್ದಾರೆ.
ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು.
ಇದಾದ ಬಳಿಕ ಸಿಬಿಐ ಎಫ್ಐಆರ್ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್ 9ರಂದು ಬಂಧಿಸಿತ್ತು. ಸಿಸೋಡಿಯಅ ಅವರು ಫೆಬ್ರವರಿ 28 ಎಂದು ದೆಹಲಿ ಕ್ಯಾಬಿನೆಟ್ ಗೆ ರಾಜೀನಾಮೆ ನೀಡಿದ್ದರು.
ಇಡಿ ಹಾಗೂ ಸಿಬಿಐ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿವೆ. ಹಗರಣದಲ್ಲಿ ಅವರ ಆಳವಾದ ಪಾತ್ರವನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಂಸ್ಥೆ ಹೊಂದಿದೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದ ಮುಂದೆ ಹೇಳಿಕೊಂಡಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.