ಮನೆ ರಾಜ್ಯ ರೈತ ಸಂಘ ಬೆಂಬಲಿತ ಪ್ರಸನ್ನ ನಾಮಪತ್ರ ಸಲ್ಲಿಕೆಗೆ ಜನರಿಂದಲೇ ಠೇವಣಿ ಹಣ ಸಂಗ್ರಹ

ರೈತ ಸಂಘ ಬೆಂಬಲಿತ ಪ್ರಸನ್ನ ನಾಮಪತ್ರ ಸಲ್ಲಿಕೆಗೆ ಜನರಿಂದಲೇ ಠೇವಣಿ ಹಣ ಸಂಗ್ರಹ

0

ಮೈಸೂರು(Mysuru): ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆಯ ರೈತ ಸಂಘ ಬೆಂಬಲಿತ ಅಭ್ಯರ್ಥಿ ಪ್ರಸನ್ನ ಎನ್‌.ಗೌಡ ಅವರ ನಾಮಪತ್ರ ಸಲ್ಲಿಕೆಗೆ ಠೇವಣಿ ಹಣವನ್ನು ಬುಧವಾರ ಇಲ್ಲಿ ಜನರಿಂದಲೇ ಸಂಗ್ರಹಿಸಲಾಯಿತು.

ಪುರಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ  ನಾಮಪತ್ರ ಸಲ್ಲಿಸಲು  10 ಸಾವಿರ ಬೇಕಿದ್ದು, ಹಣ ನೀಡುವಂತೆ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮನವಿ ಮಾಡಿ, ಅವರು ಹಣ ಹಾಕಿ ಚಾಲನೆ ನೀಡಿದರು.

ಈ ಸಂದರ್ಭ ಪಾಲ್ಗೊಂಡಿದ್ದ ರೈತರು, ಮಹಿಳೆಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಮುಖಂಡರು  10, 20, 50, 100, 500 ಮುಖಬೆಲೆಯ ನೋಟುಗಳನ್ನು ಜೋಳಿಗೆಗೆ ಹಾಕಿದರು. 18,500 ಸಂಗ್ರಹವಾಯಿತು.

ನಾನು ಚುನಾವಣಾ ಪ್ರಚಾರಕ್ಕೆ ಹೋದಲೆಲ್ಲಾ ಪದವೀಧರರು ಮತ ನೀಡುವ ಭರವಸೆ ನೀಡಿ ಹಣ ಕೂಡ ನೀಡುತ್ತಿದ್ದಾರೆ. ಇದುವರೆಗೆ ಜನರೇ ನೀಡಿದ ಹಣ 15ಲಕ್ಷ ದಾಟಿದೆ. ಅದನ್ನು ಒಳ್ಳೆಯ ಕಾರ್ಯಕ್ಕೆ ಬಳಸುತ್ತೇನೆ. ಹೊಸ ನಡೆ ನುಡಿಯ ರಾಜಕಾರಣಕ್ಕೆ ಮುನ್ನುಡಿ ಬರೆಯುತ್ತಿರುವ ದಿನವಿದು. ಚಳವಳಿಗಾರರ ಕನಸು ನನಸಾಗುತ್ತಿದೆ ಎಂದು ಅಭ್ಯರ್ಥಿ ಪ್ರಸನ್ನ ಎನ್‌.ಗೌಡ ಹೇಳಿದರು.

ರೈತ ಸಂಘ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಆಮ್‌ ಆದ್ಮಿ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳು ಅವರನ್ನು ಬೆಂಬಲಿಸಿವೆ.