ಕಲಬುರಗಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ನಡೆದಿದೆ.
ರಘು ರಡ್ಡಿ ಮತ್ತು ರಾಹುಲ್ ರೆಡ್ಡಿ ಹಲ್ಲೆಗೊಳಗಾದವರು. ಮೆಹಬೂಬ್, ಸ್ನೇಹಿತರಾದ ಸೈಯದ್, ಸಲ್ಮಾನ್, ಶೇಖ್ ಹಲ್ಲೆ ಮಾಡಿದ ಆರೋಪಿಗಳು. ರಘು ರೆಡ್ಡಿ ಹಾಗೂ ರಾಹುಲ್ ರೆಡ್ಡಿ ಗ್ಯಾರೇಜ್ ನಡೆಸುತ್ತಿದ್ದಾರೆ.
ಆರೋಪಿ ಮೆಹಬೂಬ್ ಪಟೇಲ್ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನು. ರಾಹುಲ್ ರೆಡ್ಡಿ ಬೈಕ್ ಮೇಲೆ ಹೋಗುವಾಗ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಬಳಿಕ ರಾಹುಲ್ ರೆಡ್ಡಿ ಲಾರಿಯನ್ನು ರಸ್ತೆ ಮಧ್ಯದಲ್ಲಿ ಏಕೆ ನಿಲ್ಲಿಸಿರುವೆ ಎಂದು ಮೇಹಬೂಬ್ ಪಟೇಲ್ನನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಮೇಹಬೂಬ್ ಪಟೇಲ್ “ನಾನು ಲಾರಿ ಎಲ್ಲಿ ಬೇಕಾದರೂ ನಿಲ್ಲಿಸುತ್ತೇನೆ ನಿನ್ಯಾವನೋ ಕೇಳವನು” ಅಂತ ಅವಾಜ್ ಹಾಗಿದ್ದಾನೆ. ಬಳಿಕ ರಾಹುಲ್ ಅವರಿಗೆ ಮೇಹಬೂಬ್ ಪಟೇಲ್ ಅವಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಇಬ್ಬರ ಮಧ್ಯೆ ಗಲಾಟೆ ವಿಚಾರ ತಿಳಿದು ರಾಹುಲ್ ಸಹೋದರ ರಘು ಸ್ಥಳಕ್ಕೆ ಬಂದಿದ್ದಾನೆ. ನಂತರ ಮೇಹಬೂಬ್ ಪಟೇಲ್ ಸ್ನೇಹಿತರಾದ ಸೈಯದ್ ಸುಲ್ತಾನ್, ಸಲ್ಮಾನ್ ಪಟೇಲ್, ಮೇಹಬೂಬ್ ಪಟೇಲ್, ಶೇಖ್ ಸಮೀರ್ ಸ್ಥಳಕ್ಕೆ ಬಂದು ಸಾರ್ವಜನಿಕವಾಗಿ ಏಕಾ ಎಕಿ ಸಹೋದರ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕರ ಮೇಲೆ ಹಲ್ಲೆ ಮಾಡಿದ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗಾಯಾಳು ರಘು ರೆಡ್ಡಿಯನ್ನು ಕಲಬುರಗಿಯಲ್ಲಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸೇಡಂ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಾದ ಸೈಯದ್ ಸುಲ್ತಾನ್, ಸಲ್ಮಾನ್ ಪಟೇಲ್, ಲಾರಿ ಚಾಲಕ ಮೇಹಬೂಬ್, ಸಮೀರ್ನನ್ನು ಬಂಧಿಸಿದ್ದಾರೆ. ಎ1 ಆರೋಪಿ ಸೈಯದ್ ಸಮೀರ್ ಸೇರಿದಂತೆ ಇನ್ನೂ ಹಲವರು ಪರಾರಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.