ಮನೆ ರಾಷ್ಟ್ರೀಯ ಜ್ಞಾನವಾಪಿ ಪ್ರಕರಣ: ಶಿವಲಿಂಗನ ದರ್ಶನ, ಪೂಜೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಕೆ; ತ್ವರಿತ ನ್ಯಾಯಾಲಯಕ್ಕೆ ವರ್ಗ

ಜ್ಞಾನವಾಪಿ ಪ್ರಕರಣ: ಶಿವಲಿಂಗನ ದರ್ಶನ, ಪೂಜೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಕೆ; ತ್ವರಿತ ನ್ಯಾಯಾಲಯಕ್ಕೆ ವರ್ಗ

0

ವಾರಾಣಸಿ (Varanasi)- ಇಲ್ಲಿನ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗ ದರ್ಶನಕ್ಕೆ ಹಾಗೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಹೊಸ ಅರ್ಜಿಯೊಂದು ಸಲ್ಲಿಕೆಯಾಗಿದೆ.

ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ತ್ವರಿತ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ. ಈ ಅರ್ಜಿ ವಿಚಾರಣೆಯನ್ನು ತ್ವರಿತ ನ್ಯಾಯಾಲಯವು ಮೇ 30ರಂದು ನಡೆಸಲಿದೆ ಎಂದು ಸರ್ಕಾರದ ಪರ ವಕೀಲ ರಾಣಾ ಸಂಜೀವ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

ವಿಶ್ವ ವೇದಿಕ್ ಸನಾತನ ಸಂಘದ ಪರವಾಗಿ ಸಂಘದ ಅಧ್ಯಕ್ಷ ಜಿತೇಂದ್ರ ಸಿಂಹ ಬಿಸೇನ ಅವರ ಪತ್ನಿ ಕಿರಣ್ ಸಿಂಗ್, ಸಂಘದ ಪ್ರಧಾನ ಕಾರ್ಯದರ್ಶಿ ಅವರು, ಈ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಶಿವಲಿಂಗ ಪತ್ತೆಯಾದ ಮಸೀದಿ ಆವರಣದೊಳಕ್ಕೆ ಮುಸ್ಲಿಮರ ಪ್ರವೇಶ ನಿರ್ಬಂಧಿಸಬೇಕು. ಜೊತೆಗೆ ಈ ಆವರಣವನ್ನು ತಮಗೆ ಬಿಟ್ಟುಕೊಟ್ಟು, ಶಿವಲಿಂಗಕ್ಕೆ ಪೂಜೆ-ಪುನಸ್ಕಾರ ಮತ್ತು ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.