ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.
ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.
ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು ಎಂದು ಇತಿಹಾಸ ಸ್ಮರಿಸಿಕೊಂಡರು.
ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ ಎಂದು ತಮ್ಮ ಮೇಲೆ ಆರೋಪಿಸಿರುವವರಿಗೆ ಟೀಕಿಸಿದರು.
ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ ಗಳು. ನಾನೂ ರಾಚಯ್ಯನವರ ಪ್ರಾಡಕ್ಟು ಎಂದರು.
ರಾಚಯ್ಯನವರು ನಡೆದಂತ ದಾರಿಯಲ್ಲೇ ನಡೆಯಪ್ಪಾ ಎಂದು ಅವರ ಪುತ್ರ ಶಾಸಕ ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿ, ಸದಾ ಬಡವರ ಪರವಾಗಿ ಇರಬೇಕು. ಯಾರನ್ನೂ ದ್ವೇಷಿಸಬಾರದು ಎಂದರು.
ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯನವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದರು.
ರಾಚಯ್ಯ ಸ್ಮಾರಕದಲ್ಲಿ IAS-IPS ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದರಾದ ಸುನಿಲ್ ಬೋಸ್, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.