ಮೇಪ್ಪಾಡಿ: ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಭೇಟಿ ನೀಡಿದ್ದಾರೆ. ಕಲ್ಪಟ್ಟಾದಿಂದ ರಸ್ತೆ ಮಾರ್ಗವಾಗಿ ಚೂರಲ್ಮಲ ತಲುಪಿದ ಮೋದಿ, ವೆಳ್ಳಾರ್ಮಲ ಶಾಲೆಯ ಹಿಂದಿನ ಹದಗೆಟ್ಟ ರಸ್ತೆಯಲ್ಲಿ ನಡೆದು ಅಲ್ಲಿನ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯದರ್ಶಿ ವಿ.ವೇಣು, ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಮತ್ತು ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಅವರು ಪ್ರಧಾನಿಗೆ ಮಾಹಿತಿ ನೀಡಿದರು.
ಪ್ರಧಾನಿ ನಡೆದಾಡುವ ಈ ರಸ್ತೆಯ ಬಳಿ ಹಲವು ಮನೆಗಳಿದ್ದವು. ಈಗ ಈ ಭಾಗ ಕಲ್ಲುಗಳಿಂದ ತುಂಬಿದೆ. ಬಳಿಕ ಅದೇ ಮಾರ್ಗವಾಗಿ ಹಿಂತಿರುಗಿ ಸೇನೆ ನಿರ್ಮಿಸಿರುವ ಬೈಲಿ ಸೇತುವೆ ಮೂಲಕ ನಡೆದುಕೊಂಡು ಬಂದಿದ್ದಾರೆ ಮೋದಿ. ಮಿಷನ್ ತಂಡವು ದುರಂತದ ಪ್ರಮಾಣವನ್ನು ಮೋದಿಯವರಿಗೆ ವಿವರಿಸಿದೆ. ಕಣ್ಣೂರಿಗೆ ಬಂದಿಳಿದ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು.
ದುರಂತ ಸ್ಥಳಕ್ಕೆ ಭೇಟಿ ನೀಡಿದ ನಂತರ ವಯನಾಡ್ ಕಲೆಕ್ಟರೇಟ್ ತಲುಪಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಕಣ್ಣೂರಿಗೆ ಹಿಂತಿರುಗಿ ಸಂಜೆ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಮರಳಲಿದ್ದಾರೆ.
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಲು ಮತ್ತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರು ಮತ್ತು ಬದುಕುಳಿದವರನ್ನು ಭೇಟಿ ಮಾಡಲು ಮತ್ತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಪರಿಹಾರ ಶಿಬಿರಕ್ಕೆ ಭೇಟಿ ನೀಡಿದರು.
ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ತೆರವು ಕಾರ್ಯಗಳ ಕುರಿತು ಅವರಿಗೆ ಮಾಹಿತಿ ನೀಡಲಾಗುತ್ತಿದೆ. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಜೊತೆಗಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.