ನವದೆಹಲಿ: ಆನೆಗಳಿಗೆ ಅನುಕೂಲಕರವಾದ ಆವಾಸಸ್ಥಾನವನ್ನು ಖಾತ್ರಿಪಡಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.
ವಿಶ್ವ ಆನೆ ದಿನದ ಪ್ರಯುಕ್ತ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಆನೆಗಳನ್ನು ಸಂರಕ್ಷಿಸುವ ಸಮುದಾಯದ ಪ್ರಯತ್ನಗಳನ್ನು ಪ್ರಶಂಸಿಸುವ ಸುಸಂದರ್ಭ ಇದಾಗಿದೆ. ಆನೆಗಳು ಅಭಿವೃದ್ಧಿ ಹೊಂದಲು ಅನುಕೂಲಕರವಾದ ಆವಾಸಸ್ಥಾನವನ್ನು ಖಾತ್ರಿಪಡಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುವುದು ನಮ್ಮ ಬದ್ಧತೆಯಾಗಿದೆ. ಆನೆಗಳು ನಮ್ಮ ಸಂಸ್ಕೃತಿ ಮತ್ತು ಇತಿಹಾಸದೊಂದಿಗೆ ಸಂಬಂಧ ಹೊಂದಿವೆ. ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಆನೆಗಳ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಸಂತೋಷದ ಸಂಗತಿ’ ಎಂದು ಬರೆದುಕೊಂಡಿದ್ದಾರೆ.
ವಿಶ್ವ ಆನೆ ದಿನಾಚರಣೆ ಅಂಗವಾಗಿ ಆನೆಗಳು ಸಂಭ್ರಮಿಸಲು ವಿವಿಧ ಚಟುವಟಿಕೆಗಳನ್ನು ಉದ್ಯಾನಗಳಲ್ಲಿ ರೂಪಿಸಲಾಗಿದೆ. ಆನೆಗಳಿಗೆ ಗೆಣಸು, ಬಾಳೆಹಣ್ಣು, ಕಲ್ಲಂಗಡಿ, ಕಬ್ಬು, ಸೇರಿದಂತೆ ವಿಶೇಷ ಆಹಾರವನ್ನು ನೀಡಲಾಗುತ್ತಿದೆ.
ಆನೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆನೆಗಳ ನಿರ್ವಹಣೆ, ಕಾಡಿನಲ್ಲಿ ಎದುರಿಸುವ ಸಮಸ್ಯೆ, ಆನೆ ಚಲನ ವಲನಗಳ ಬಗ್ಗೆ ಪ್ರವಾಸಿಗರಿಗೆ ಉದ್ಯಾನದ ಸ್ವಯಂಸೇವಕರು ಮಾಹಿತಿ ನೀಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.