ಮನೆ ರಾಜ್ಯ ಹೆಸರಾಂತ ವೈದ್ಯ ಡಾ. ಎಸ್. ಸಿ.ಶಂಕರೇಗೌಡ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ಶಿಫ್ಟ್

ಹೆಸರಾಂತ ವೈದ್ಯ ಡಾ. ಎಸ್. ಸಿ.ಶಂಕರೇಗೌಡ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ಶಿಫ್ಟ್

0

ಬೆಂಗಳೂರು (Bengaluru)- ಹೃದಯಾಘಾತಕ್ಕೊಳಗಾಗಿರುವ ಮಂಡ್ಯದ ಹೆಸರಾಂತ ವೈದ್ಯ ಡಾ. ಎಸ್. ಸಿ.ಶಂಕರೇಗೌಡ ಅವರನ್ನು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಶಸ್ತ್ರ ಚಿಕಿತ್ಸೆಗಾಗಿ ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ಪೋರ್ಟಿಸ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಗುರುವಾರ ಬೆಳಿಗ್ಗೆ ಶಂಕರೇಗೌಡರಿಗೆ ತೆರೆದ ಹೃದಯದ ಶಸ್ತ್ರ ಚಿಕಿತ್ಸೆ ನಡೆಯುವ ಸಾಧ್ಯತೆಯಿದೆ.

ಗುಣಮಟ್ಟದ ಶಸ್ತ್ರ ಚಿಕಿತ್ಸೆಗಾಗಿಯೇ ಡಾ. ಶಂಕರೇಗೌಡ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಇದರ ಹೊರತಾಗಿ ಅವರ ಆರೋಗ್ಯದಲ್ಲಿ ಏರುಪೇರು ಆಗಿಲ್ಲ. ಮೈಸೂರಿನಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಶಸ್ತ್ರ ಚಿಕಿತ್ಸೆ ಅನಿವಾರ್ಯವಾಗಿದೆ. ಶಂಕರೇಗೌಡರು ಚೆನ್ನಾಗಿಯೇ ಮಾತನಾಡುತ್ತಿದ್ದಾರೆ. ಎಲ್ಲರನ್ನೂ ಗುರುತಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗೇನೂ ಇಲ್ಲ. ಜನರು, ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಶಂಕರೇಗೌಡರ ಪತ್ನಿ ರುಕ್ಮಿಣಿ ಅವರು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದ ಡಾ. ಶಂಕರೇಗೌಡ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿತ್ತು. ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಒಂದು ವಾರದ ನಂತರ ಬೈಪಾಸ್ ಸರ್ಜರಿ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು.

ಡಾ. ಶಂಕರೇಗೌರು ಮೃತಪಟ್ಟಿದ್ದಾರೆಂದು ಮಂಗಳವಾರ ಸುದ್ದಿ ಹಬ್ಬಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಅವರ ಫೋಟೋಗಳನ್ನು ಹಾಕಿ ಸಾಕಷ್ಟು ಮಂದಿ ಶ್ರದ್ದಾಂಜಲಿ ಸಲ್ಲಿಸಿದ್ದರು. ಆಗ ಶಂಕರೇಗೌಡರ ಪತ್ನಿ ರುಕ್ಮಿಣಿ ಅವರು ಸ್ಪಷ್ಟೀಕರಣ ನೀಡಿದ್ದರು. ಮತ್ತೆ ಬುಧವಾರ ಅವರನ್ನು ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ಕರೆದೊಯ್ದಾಗಲೂ, ಡಾ. ಶಂಕರೇಗೌಡರ ಆರೋಗ್ಯದಲ್ಲಿ ‘ಏರು – ಪೇರು, ಅವರ ಸ್ಥಿತಿ ಗಂಭೀರ’ ಎಂದೆಲ್ಲಾ ವಂದತಿಗಳನ್ನು ಹಬ್ಬಿಸಲಾಗಿತ್ತು.