ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನಮೊದಲು ಅಂದರೆಅ. 2ರಿಂದ 21 ದಿನಗಳ ಕಲಾ ದೀಪಾಲಂಕಾರ ಮಾಡಲುನಿರ್ಧರಿಸಲಾಗಿದೆ.
ಅಲ್ಲದೆ, ವಿದ್ಯುತ್ ದೀಪಾಲಂಕಾರ ಈ ಬಾರಿಯ ದಸರಾಗೆ ಮತ್ತಷ್ಟು ಕಳೆ ಕಟ್ಟಬೇಕು. ಈ ವಿಚಾರವಾಗಿ ಸೆಸ್ಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ.
2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿದಂತೆ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ.
ಹಸಿರು ಚಪ್ಪರ, ಸುಸ್ವಾತಗ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.