ಬೆಂಗಳೂರು: ಎಚ್ಎಂಟಿ ಕಂಪನಿಯ ಜಮೀನನ್ನು ಅರಣ್ಯ ಒತ್ತುವರಿ ನೆಪದಲ್ಲಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವ ದುಸ್ಸಾಹಸ ಮಾಡಬಾರದು ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ವಿವಿಧೆಡೆ ಎಚ್ಎಂಟಿ ಕಂಪನಿ ವಶದಲ್ಲಿರುವ 699 ಎಕರೆ ಜಮೀನು ದಶಕಗಳ ಹಿಂದೆಯೇ ಹಣ ಪಾವತಿಸಿ ಪಡೆದಿದೆ. ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಅರಣ್ಯ ಇಲಾಖೆಯೇ ಕಂಪನಿಯ ಜಮೀನು ಒತ್ತುವರಿ ಮಾಡಿದೆ ಎಂದು ಆರೋಪಿಸಿದರು.
ಅರಣ್ಯ ಭೂಮಿ ಹಾಗೂ ಎಚ್ಎಂಟಿ ಕಂಪನಿ ಜಮೀನುಗಳ ಕುರಿತು ಮಾಹಿತಿ ಇಲ್ಲದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಮೇಲಿನ ಹಗೆತನಕ್ಕೆ ರಾಜ್ಯ ಹಾಳು ಮಾಡುತ್ತಿದ್ದಾರೆ ಎಂದು ದೂರಿದರು.
ಭದ್ರಾವತಿಯ ವಿಐಎಸ್ಎಲ್ ಪುನಶ್ಚತನಕ್ಕೆ ಪ್ರಧಾನಿ ಜೊತೆ ಚರ್ಚಿಸಲಾಗುವುದು. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಅಭಿವೃದ್ಧಿ ಪಡಿಸಲು ₹10 ಸಾವಿರ ಕೋಟಿಯ ಅಗತ್ಯವಿದೆ ಎಂದರು. ತುಂಗಭದ್ರಾ ಜಲಾಶಯದಲ್ಲಿ ಗೇಟ್ ಸಮಸ್ಯೆ ಕುರಿತು ತನಿಖೆ ನಡೆಸಲು ತಜ್ಞರನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.
ನೀರು ಪೋಲಾಗಿ ರೈತರಿಗೆ ಆಗುತ್ತಿರುವ ಅನ್ಯಾಯಕ್ಕೆ ಯಾರು ಹೊಣೆ ಎಂಬುದು ನಿರ್ಧಾರವಾಗಬೇಕು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.