ಬೆಂಗಳೂರು: ನಾಪತ್ತೆ ದೂರು ನೀಡಲು ಹೋದ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ವಿಧಾನಸೌಧ ಮುಂಭಾಗ ತನ್ನ ಎಲೆಕ್ಟ್ರಿಕ್ ಬೈಕ್ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಯುವಕನನ್ನು ಬಂಧಿಸಲಾಗಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪೃಥ್ವಿರಾಜ್(27) ಬಂಧಿತ ಆರೋಪಿ.
ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಧಾನಸೌಧ ಮುಂಭಾಗ ಬೈಕ್ಗೆ ಬೆಂಕಿ ಹಚ್ಚಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹಾಕಿ ದುರ್ವರ್ತನೆ ತೋರಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಪದವಿ ಪಡೆದಿರುವ ಪೃಥ್ವಿರಾಜ್ ಯಶವಂತ ಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. 15 ದಿನಗಳ ಹಿಂದೆ ಸ್ನೇಹಿತರ ಜತೆಗೆ ಪ್ರವಾಸಕ್ಕೆ ತೆರಳಿದ್ದ. 3 ದಿನ ಕಳೆದರೂ ಚಳ್ಳಕೆರೆಯಲ್ಲಿದ್ದ ತಾಯಿಗೆ ಕರೆ ಮಾಡಿರಲಿಲ್ಲ. ತಾಯಿ ಕರೆ ಮಾಡಿದಾಗ ಈತನ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಅದರಿಂದ ಗಾಬರಿಗೊಂಡಿದ್ದ ತಾಯಿ, ಚಳ್ಳಕೆರೆ ಪೊಲೀಸ್ ಠಾಣೆಗೆ ತೆರಳಿ ಮಗನ ನಾಪತ್ತೆ ಪ್ರಕರಣ ದಾಖಲಿಸುವಂತೆ ಕೋರಿ ದ್ದರು. ದೂರು ಸ್ವೀಕರಿದ ಪೊಲೀಸರು, ಆಕೆಯನ್ನು ನಿಂದಿಸಿ ವಾಪಸ್ ಕಳುಹಿಸಿದ್ದರು ಎಂದು ಹೇಳಲಾಗಿದೆ.
ಇನ್ನು ವಾರದ ಬಳಿಕ ಪೃಥ್ವಿರಾಜ್ ಮನೆಗೆ ಬಂದಿದ್ದ. ಆಗ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳುಹಿಸಿದ್ದರು ಎಂದು ತಾಯಿ ಹೇಳಿದ್ದರು. ಅದರಿಂದ ಸಿಟ್ಟಿಗೆದ್ದ ಪೃಥ್ವಿರಾಜ್, ತಾಯಿಯೊಂದಿಗೆ ಠಾಣೆಗೆ ತೆರಳಿ ನಾಪತ್ತೆ ದೂರು ಏಕೆ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದ್ದ. ಆಗ ಪೊಲೀಸರು ಮೊಬೈಲ್ ಕಸಿದುಕೊಂಡು ಠಾಣೆಯೊಳಗೆ ಕರೆದೊಯ್ದಿದ್ದರು. ಇದರಿಂದ ಸಿಟ್ಟಿಗೆದ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಆರೋಪಿ ಪೃಥ್ವಿರಾಜ್ ಕೆಲ ದಿನಗಳ ಹಿಂದೆ ವಿಧಾನಸೌಧ, ಐಐಎಸ್ಸಿ ಸೇರಿ ಕೆಲ ಕಟ್ಟಡ ಗಳನ್ನು ಸ್ಫೋಟಿಸುವುದಾಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿಬಿಟ್ಟಿದ್ದ. ಅದನ್ನು ಗಮನಿಸಿದ ಚಳ್ಳ ಕೆರೆ ಡಿವೈಎಸ್ಪಿ ಠಾಣೆಗೆ ಕರೆಸಿ ಪ್ರಶ್ನಿಸಿದಾಗ, ಆಗ ಯುವಕ “ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವೇ ಪಿಸ್ತೂಲ್ನಿಂದ ಪಿಎಸ್ಐಗೆ ಗುಂಡು ಹಾರಿಸುತ್ತೇನೆ’ ಎಂದು ಬೆದರಿಕೆ ಒಡ್ಡಿದ್ದ.
ಆಗ ಪೃಥ್ವಿ ಹಾಗೂ ಅವರ ತಾಯಿಗೆ ಡಿವೈಎಸ್ಪಿ ಎಚ್ಚರಿಕೆ ನೀಡಿ ಕಳುಹಿಸಿ ದ್ದರು. ಬುಧವಾರ ಯಶವಂತ ಪುರಕ್ಕೆ ಮನೆಗೆ ಬಂದು ಸ್ವಂತ ಬೈಕ್ ಅನ್ನು ವಿಧಾನಸೌಧ ಎದುರು ತಂದು ಬೆಂಕಿ ಹಾಕಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.