ಮನೆ ರಾಜಕೀಯ ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು: ಜಿ ಪರಮೇಶ್ವರ್​

ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು: ಜಿ ಪರಮೇಶ್ವರ್​

0

ತುಮಕೂರು: ಗಣೇಶೋತ್ಸವ ಹೆಸರೇಳಿಕೊಂಡು ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಯಾರಾದರೂ ಅಂತಹ ಪ್ರಯತ್ನ ಮಾಡಿದರೆ ಕಾನೂನು ಕ್ರಮ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

Join Our Whatsapp Group

ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ನಾನು ಮನವಿ ಮಾಡಿಕೊಳುತ್ತೇನೆ. ಶಾಂತಿಯಿಂದ ಗಣೇಶೋತ್ಸವ ಆಚರಿಸೋಣ. ಅದಕ್ಕೆ ಬೇಕಾದಂತಹ ವಾತಾವರಣ ನಾವು ತಮಗೆ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕಳೆದ ಬಾರಿ ಸೆಪ್ಟೆಂಬರ್​ನಲ್ಲಿ ಗಣೇಶೋತ್ಸವ ಆಚರಣೆ ಮಾಡಲಾಗಿತ್ತು. ಈ ಬಾರಿಯೂ ಸೆ.7ರಂದು ಗಣಪತಿಯ ಉತ್ಸವ ಪ್ರಾರಂಭ ಆಗುತ್ತೇವೆ. ನನಗೆ ವಿಶ್ವಾಸ ಇದೆ, ನಮ್ಮ ಕರ್ನಾಟಕದ ಜನತೆ ಶಾಂತಿ ಪ್ರಿಯರು. ಅಂತಹ ಘಟನೆಗಳು ನಡೆಯೋದಕ್ಕೆ ಬಿಡಲ್ಲ. ಎಲ್ಲಾ ಸಹಕಾರ ಇರಲಿ ಎಂದಿದ್ದಾರೆ.

ರಾಜ್ಯದ ಜನರಿಗೆ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿತ್ತು. ಯಾವುದೇ ಅಹಿತಕರವಾದ ಘಟನೆಗಳು ನಡೆಯೋದಕ್ಕೆ ನಾವು ಬಿಡಲ್ಲ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಎಲ್ಲಾ ಸಮುದಾಯಗಳು ಶಾಂತಿಯಿ‌ಂದ ಬಾಳಬೇಕೆಂದು ನಾವು ಹೇಳಿದ್ದೇವೆ.

ರಾಜ್ಯದಲ್ಲಿ ಕಳೆದ 1 ವರ್ಷದಿಂದ ಯಾವುದೇ ಕೋಮುಗಲಭೆಗಳಾಗಲಿ, ಅಹಿತಕರವಾದಂತಹ ಗಲಾಟೆಗಳನ್ನು ನಡೆಯೋದಕ್ಕೆ ರಾಜ್ಯ ಸರ್ಕಾರ ಮತ್ತು ವಿಶೇಷವಾಗಿ ಗೃಹ ಇಲಾಖೆ ಅವಕಾಶ ಕೊಟ್ಟಿಲ್ಲ. ರಾಜ್ಯದ ಜನರು ಸಹಕರಿಸಿದ್ದಾರೆ, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯದಲ್ಲಿ  ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ

ಗ್ಯಾರಂಟಿ ಯೋಜನೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಮ್ಮ ಸರ್ಕಾರ ಜನ ಸಮುದಾಯಕ್ಕೆ ಬೇಕಾದ ಆಡಳಿತವನ್ನ ಕೊಡುತ್ತೇವೆ ಅಂತ ಹೇಳಿದ್ದೇವೆ. ಬಡತನ ನಿರ್ಮೂಲನೆ ಮಾಡುವ ಕಾರ್ಯಕ್ರಮಗಳನ್ನ ಹಾಕಿಕೊಳುತ್ತೇವೆ ಅಂತ ಹೇಳಿದ್ದೇವೆ. ಐದು ಗ್ಯಾರಂಟಿಗಳನ್ನ ಚುನಾವಣೆಗೂ ಮೊದಲೇ ಪ್ರಕಟಣೆ ಮಾಡಿದ್ದೇವೆ. ಅದರ ಮೂಲ ಉದ್ದೇಶ, ಬಡತನ ರೇಖೆಗಿಂತ ಕೆಳಗೆ ಇದ್ದಾರೆ ಅವರ ಬಡತನ ನಿರ್ಮೂಲನೆ ಮಾಡುವ ಪ್ರಯತ್ನ ಅಷ್ಟೇ.

ಆರ್ಥಿಕ ಸಹಾಯ ಕೆಲವು ಸವಲತ್ತುಗಳನ್ನ ಕೊಡುವ ಮೂಲಕ ಬಡತನದ ಮೇಲೆತ್ತುವ ಕೆಲಸ ಮಾಡಿದ್ದೇವೆ. ಸಾವಿರಾರು ರೂಪಾಯಿ ಹಣವನ್ನ ಅವರಿಗಾಗಿ ಈಗಾಗಲೇ ಕೊಟ್ಟಿದ್ದೇವೆ. ಟೀಕೆ ಟಿಪ್ಪಣಿಗಳು ಬಂದಿರಬಹುದು. ವಿರೋಧ ಪಕ್ಷದ ನಾಯಕರು ಬಜೆಟ್​ನಲ್ಲಿರುವ ಹಣವನ್ನ ಪೋಲ್ ಮಾಡ್ತಿದ್ದಾರೆ ಎಂದು ಟೀಕೆ ಮಾಡ್ತಿರಬಹದು ಹಲವು ವ್ಯಾಖ್ಯಾನ ಮಾಡಿರಬಹುದು. ಆದರೆ ನಮ ಉದ್ದೇಶ ಆ ಬಡ ಜನರನ್ನ ಮೇಲೆತ್ತುವ ಉದ್ದೇಶ ಅಷ್ಟೇ. ಈಗಲು ಸಹ ಅದಕ್ಕೆ ಗೊಂದಲ ಸೃಷ್ಟಿ ಮಾಡುವ ಕೆಲಸ ನಡಿಯುತ್ತಿದೆ. ಅದು ಯಾವುದೇ ಸಂದರ್ಭದಲ್ಲಿಯೂ ಸಹ ಆ ಕಾರ್ಯಕ್ರಮಗಳನ್ನ ಸ್ಥಗಿತ ಮಾಡಲ್ಲ. ನಾವು ಯಾವ ನಿಯಮಗಳನ್ನ ಹೊಸದಾಗಿ ಸೇರಿಸುವುದಕ್ಕೆ ಹೋಗಲ್ಲ ಎಂದಿದ್ದಾರೆ.