ಮೈಸೂರು: ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಅದರಂತೆ ಉತ್ತಮ ಕರ್ತವ್ಯ ನಿರ್ವಹಣೆ ಮಾಡಿದ ರಾಜ್ಯದ 126 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದೆ. ಆದರೆ, ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಒಂದು ತಿಂಗಳ ಹಿಂದೆ ಅಮಾನತು ಆಗಿದ್ದ ಸಲೀಂ ಪಾಷಾ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯದ ಜೊತೆಗೆ ದಾಖಲೆಗಳ ಸೋರಿಕೆ ಮಾಡಿರುವ ಶಂಕೆಯ ಆರೋಪಗಳ ಹಿನ್ನೆಲೆ ಅಮಾನತುಗೊಳಿಸಲಾಗಿತ್ತು. ಹೀಗಿರುವಾಗ 2024ನೇ ಸಾಲಿನ ಸಿಎಂ ಪದಕ ಪಟ್ಟಿಯಲ್ಲಿ ಸಲೀಂ ಪಾಷಾ ಅವರ ಹೆಸರು ಬಂದಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
2024ರಲ್ಲಿ ಅಮಾನತು, 2023ರ ಕರ್ತವ್ಯ ನಿರ್ವಹಣೆಗೆ ಪದಕ
ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಕೇಳಿಬಂದಿತ್ತು. ಜೊತೆಗೆ ಮೊಬೈಲ್ ಕಾಲ್ ಡಿಟೈಲ್ಸ್ ಸಂಗ್ರಹ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತು ಕೂಡ ಆಗಿತ್ತು. ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಅಮಾನತುಗೊಳಿಸಲಾಗಿತ್ತು. ಇದೀಗ 2024ರಲ್ಲಿ ಅಮಾನತುಗೊಳಿಸಿ, 2023ರ ಕರ್ತವ್ಯ ನಿರ್ವಹಣೆಗೆ ಪದಕ ನೀಡಲಾಗಿದೆ. ಈ ಮೂಲಕ ಸಿಎಂ ಪದಕ ಘೋಷಣೆ ಚರ್ಚೆಗೆ ಗ್ರಾಸವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.