ಮನೆ ಅಪರಾಧ ಕೌಟುಂಬಿಕ ಕಲಹ: ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ

ಕೌಟುಂಬಿಕ ಕಲಹ: ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ

0

ಮಂಡ್ಯ: ಕೌಟುಂಬಿಕ ಕಲಹ ಹಿನ್ನಲೆ ಶಿಕ್ಷಕನೋರ್ವ ಹೆಂಡತಿ ತಲೆಗೆ ಸುತ್ತಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಪಾಂಡವಪುರ ಪಟ್ಟಣದ ಶಾಂತಿ ನಗರದಲ್ಲಿ ನಡೆದಿದೆ.

Join Our Whatsapp Group

ಆರೋಪಿ ನಟರಾಜು ರಾಗಿ ಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿದ್ದಾನೆ.

ನೆನ್ನೆ ಮನೆಯಲ್ಲಿ ಲಕ್ಷ್ಮಿ ಪೂಜೆಯ ವಿಚಾರದಲ್ಲಿ ಇಬ್ಬರ ನಡುವೆ ಕಲಹ ಉಂಟಾಗಿದ್ದು, ಈ ವೇಳೆ ಪತ್ನಿ ಅನಿತಾ ತಲೆಗೆ ಸುತ್ತಿಗೆಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಬಳಿಕ ಆರೋಪಿ ಶಿಕ್ಷಕ ನಟರಾಜು ಸ್ಥಳದಿಂದ ಪರಾರಿಯಾಗಿದ್ದಾನೆ.

ತೀವ್ರ ಗಾಯಗೊಂಡ ಪತ್ನಿ ಅನಿತಾಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿದ ಪಾಂಡವಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.  ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.