ಬೆಂಗಳೂರು: ಇದೇ 27ರಂದು ರಾಜ್ಯಾದ್ಯಂತ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ (ಕೆಎಎಸ್) ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇತರೆ ಯಾವುದೇ ಆಭರಣಗಳಿಗೆ ನಿಷೇಧ ಸೇರಿದಂತೆ, ಕಡ್ಡಾಯವಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ಬಿಡುಗಡೆ ಮಾಡಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಬೆಳಗ್ಗೆ 10 ಗಂಟೆಗೆ ಆರಂಭವಾಗುವ ಪರೀಕ್ಷೆಗೆ 8 ಗಂಟೆಗೂ ಮುನ್ನ ಮತ್ತು ಮಧ್ಯಾಹ್ನ 2 ಗಂಟೆಯ ಪರೀಕ್ಷೆಗೆ 12ಕ್ಕೂ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಹಾಜರಾಗುವ ಪ್ರತಿಯೊಬ್ಬರೂ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆಗೆ ಒಳಗಾಗುವುದು ಕಡ್ಡಾಯ. ಪರೀಕ್ಷೆ ಮಧ್ಯೆ ಶೌಚಾಲಯಕ್ಕೆ ಹೋಗುವವರು ಮತ್ತೆ ತಪಾಸಣೆಗೆ ಒಳಗಾಗಲೇಬೇಕು. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಿಶೇಷ ವಸ್ತು ಅಥವಾ ವಸ್ತ್ರಗಳನ್ನು ಧರಿಸಿರುವವರು ವಿಶೇಷ ತಪಾಸಣೆಗೆ ಒಳಗಾಗಬೇಕು ಎಂದು ಕೆಪಿಎಸ್ಸಿ ಪ್ರಕಟಣೆಯಲ್ಲಿ ತಿಳಿಸಿದೆ.
ವಸ್ತ್ರ ಸಂಹಿತೆ: ತುಂಬು ತೋಳಿನ ಶರ್ಟ್ ಅಥವಾ ಟಿ-ಶರ್ಟ್, ಹಲವು ಪದರುಗಳಿರುವ ವಿವಿಧ ವಿನ್ಯಾಸದ ವಸ್ತ್ರಗಳನ್ನು ಧರಿಸುವಂತಿಲ್ಲ. ಸರಳ ಉಡುಪು ಹಾಗೂ ಚಪ್ಪಲಿ ಧರಿಸಿರಬೇಕು. ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಬೇರೆ ಯಾವುದೇ ರೀತಿಯ ಆಭರಣ ಹಾಕಿಕೊಳ್ಳುವಂತಿಲ್ಲ.
ಶೂ ಮತ್ತು ಸಾಕ್ಸ್ಗೆ ನಿಷೇಧ ಹೇರಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬ್ಯಾಗ್ ಅಥವಾ ಫೋನ್ ಇನ್ನಿತರ ವೈಯಕ್ತಿಕ ವಸ್ತುಗಳನ್ನು ಭದ್ರವಾಗಿ ಇರಿಸಲು ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದು ಕೆಪಿಎಸ್ಸಿ ಸೂಚಿಸಿದೆ.
ನಿಯಮಗಳು ಎಲ್ಲಾ ಅಭ್ಯರ್ಥಿಗಳು ಮತ್ತು ಅಂಧ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿರುವ ಲಿಪಿಕಾರರಿಗೂ ಅನ್ವಯವಾಗಲಿದೆ ಎಂದು ಕೆಪಿಎಸ್ಸಿ ಹೇಳಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.