ಗುಂಡ್ಲುಪೇಟೆ(ಚಾಮರಾಜನಗರ): ಖಾಸಗಿ ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೊರ್ವನ ಬಲಗಾಲು ನಜ್ಜುಗುಜ್ಜಾದ ಘಟನೆ ಗೋಪಾಲಪುರ ಗ್ರಾಮದಲ್ಲಿ ಆ.17ರ ಶನಿವಾರ ಬೆಳಿಗ್ಗೆ ನಡೆದಿದೆ.
ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಕನ್ನೇಗಾಲ ಗ್ರಾಮದ ಖಾಸಗಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಕಾಲಿಗೆ ತೀವ್ರ ಗಾಯವಾಗಿದೆ.
ಘಟನೆ ವಿವರ: ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ತರಗತಿಗೆ ತೆರಳಲು ತನ್ನ ಶಾಲಾ ವಾಹನಕ್ಕೆ ಕಾಯುತ್ತಾ ಸೇತುವೆ ಮೇಲೆ ಕುಳಿತಿದ್ದ. ಈ ವೇಳೆ ಖಾಸಗಿ ಶಾಲಾ ವಾಹನದ ಚಾಲಕ ವಾಹನ ರಿವರ್ಸ್ ತೆಗೆಯುತ್ತಿದ್ದ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರ ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.
ಘಟನೆಯಲ್ಲಿ ಬಾಲಕನ ಕಾಲು ನಜ್ಜುಗುಜ್ಜಾಗಿದೆ. ಕೂಡಲೇ ಸ್ಥಳೀಯರು ಹೃತ್ವಿಕ್ ನನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಶಾಲಾ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.