ಬೆಂಗಳೂರು: 4 ದಶಕಗಳ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಭಾನುವಾರ ಕೂಡ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ್ದ ಸಿಎಂ, ಪ್ರಾಸಿಕ್ಯೂಷನ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಿದ್ದಾರೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಕೂಡ ಚಿಂತನೆ ನಡೆದಿತ್ತು. ಈ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ನಡೆ ಪ್ರತಿಧ್ವನಿಸುವಂತೆ ಮಾಡಿದರೆ, ರಾಜಕೀಯವಾಗಿ ಅನುಕೂಲವಾಗುತ್ತದೆಂಬ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಲಿದ್ದಾರೆ.
ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಸಿಎಂ ಪರ ವಕೀಲರು, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರ ಎಂದು ವಾದ ಮಂಡಿಸಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 17ಎ ಅಡಿ ಪ್ರಾಸಿಕ್ಯೂಷನ್ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಅಲ್ಲದೇ, ಪ್ರಾಸಿಕ್ಯೂಷನ್ ನೀಡುವ ಬಗ್ಗೆ 2021ರ ಸೆಪ್ಟಂಬರ್ನಲ್ಲಿ ಕೇಂದ್ರ ಸರ್ಕಾರವೇ ಚೆಕ್ಲಿಸ್ಟ್ ನೀಡಿದೆ. ಆ ಚೆಕ್ಲಿಸ್ಟ್ ಕೂಡಾ ಪಾಲನೆಯಾಗಿಲ್ಲ. ಇನ್ನು ಡಿಜಿ-ಐಜಿಪಿ ಮಟ್ಟದ ಅಧಿಕಾರಿಗಳು ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಬೇಕು. ಅನುಮತಿ ಕೇಳಲು ತನಿಖಾ ವರದಿ ಇರಬೇಕು. ಆದರೆ ಇಲ್ಲಿ ತನಿಖಾ ವರದಿಯೂ ಇಲ್ಲ, ಅಧಿಕಾರಿಗಳೂ ಇಲ್ಲ. ಖಾಸಗಿ ವ್ಯಕ್ತಿಗಳ ದೂರಿನನ್ವಯ ಪ್ರಾಸಿಕ್ಯೂಷನ್ಗೆ ನೀಡಿದ್ದಾರೆ. ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಇದರ ಜೊತೆಗೆ ಸುಪ್ರೀಂಕೋರ್ಟ್ ಈ ಹಿಂದೆ ತೀರ್ಪು ನೀಡಿದ್ದ ಬೇರೆ ಬೇರೆ 7 ಪ್ರಕರಣಗಳನ್ನ ಉಲ್ಲೇಖಿಸಿ, ಪ್ರಾಸಿಕ್ಯೂಷನ್ಗೆ ನೀಡುವ ನಿಯಮ ಇದಲ್ಲ ಎಂದು ಹೈಕೋರ್ಟ್ನಲ್ಲಿ ಕಾನೂನು ಯುದ್ಧ ನಡೆಸಲಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲು ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ ಮತ್ತು ಕಪಿಲ್ ಸಿಬಲ್ ಇಂದು ಬೆಂಗಳೂರಿಗೆ ಆಗಮಿಸ್ತಿದ್ದಾರೆ. ಹೀಗಾಗಿ ಇಂದು ಮಂತ್ರಾಲಯ ಪ್ರವಾಸ ಕೈಗೊಳ್ಳಬೇಕಿದ್ದ ಸಿಎಂ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ.
ಆಗಸ್ಟ್ 22ಕ್ಕೆ ಶಾಸಕಾಂಗ ಪಕ್ಷದ ಸಭೆ, 23ಕ್ಕೆ ದೆಹಲಿಗೆ ಸಿಎಂ
ರಾಜಕೀಯ ಒತ್ತಡವೂ ಇರುವುದರಿಂದ ಪ್ರತಿ ಹಂತದಲ್ಲೂ ಎಚ್ಚರಿಕೆ ಹೆಜ್ಜೆ ಇಡುತ್ತಿರುವ ಸಿಎಂ ಸಿದ್ದರಾಮಯ್ಯ ಆಗಸ್ಟ್ 22ರಂದು ಶಾಸಕಾಂಗ ಸಭೆ ಕರೆದಿದ್ದಾರೆ. ಈಗಾಗಲೇ ಹೈಕಮಾಂಡ್ ಮತ್ತು ಸಚಿವರ ಬಲ ಸಿಕ್ಕಿದೆ. ಆದರೆ, ಸಿದ್ದರಾಮಯ್ಯಗೆ ಶಾಸಕರೇ ಬಲವಾಗಿದ್ದು, ವಿಶ್ವಾಸಕ್ಕೆ ತೆಗೆದುಕೊಳ್ಳಲು ಬುಧವಾರ ಶಾಸಕಾಂಗ ಸಭೆ ನಡೆಸಲಿದ್ದಾರೆ. ಬಳಿಕ ಆಗಸ್ಟ್ 23ಕ್ಕೆ ದೆಹಲಿಗೆ ತೆರಳಲಿರುವ ಸಿಎಂ, ವರಿಷ್ಠರ ಜೊತೆ ಪ್ರಾಸಿಕ್ಯೂಷನ್ ಬಗ್ಗೆ ಚರ್ಚಿಸಲಿದ್ದಾರೆ.
ಮತ್ತೊಂದೆಡೆ ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜಕೀಯ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ಜಟಾಪಟಿ ಮುಂದುವರಿದಿದೆ.
ಸಿಎಂ ವಿರುದ್ಧ ದೂರು ನೀಡಿರೋ ಟಿಜೆ ಅಬ್ರಾಹಂ ಮತ್ತು ಪ್ರದೀಪ್ ಈಗಾಗಲೇ ಕೇವಿಯಟ್ ಸಲ್ಲಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.