ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ಚಿತ್ರ ‘ಇಬ್ಬನಿ ತಬ್ಬಿದ ಇಳೆಯಲಿ’. ಸೆಪ್ಟೆಂಬರ್ 5ಕ್ಕೆ ಬಿಡುಗಡೆ ಆಗಲಿರುವ ಈ ಸಿನಿಮಾದ ಟ್ರೇಲರ್ ಅನಾವರಣಕ್ಕೀಗ ದಿನ ನಿಗದಿ ಆಗಿದೆ.
ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ಚಿತ್ರ ‘ಇಬ್ಬನಿ ತಬ್ಬಿದ ಇಳೆಯಲಿ’. ಸಿನಿಮಾವೊಂದರ ಶೀರ್ಷಿಕೆ ಚಿತ್ರಮಂದಿರಗಳಿಗೆ ಆಗಮಿಸುವ ಪ್ರೇಕ್ಷಕರಿಗೆ ಸಿಗುವ ಮೊದಲ ಆಮಂತ್ರಣ. ಆ ಹಾದಿಯಲ್ಲಿ ‘ಇಬ್ಬನಿ ತಬ್ಬಿದ ಇಳೆಯಲಿ’ ತನ್ನ ಆಕರ್ಷಕ ಶೀರ್ಷಿಕೆಯಿಂದಲೇ ಸಿನಿರಸಿಕರ ಗಮನ ಸೆಳೆದಿದೆ. ಒಂದೊಳ್ಳೆ ಕಂಟೆಂಟ್ ಅನ್ನು ಈ ಪ್ರೊಜೆಕ್ಟ್ ಒಳಗೊಂಡಿರಲಿದೆ ಎಂಬುದರ ಸುಳಿವನ್ನು ಈಗಾಗಲೇ ಅನಾವರಣಗೊಂಡಿರುವ ಪೋಸ್ಟರ್ಸ್, ಹಾಡುಗಳು ಬಿಟ್ಟುಕೊಟ್ಟಿವೆ. ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿದ್ದು, ಬಹುನಿರೀಕ್ಷಿತ ಟ್ರೇಲರ್ ಅನಾವರಣಕ್ಕೆ ದಿನ ನಿಗದಿ ಆಗಿದೆ.
ರಕ್ಷಿತ್ ಶೆಟ್ಟಿ ಅವರು ತಮ್ಮ ವಿಭಿನ್ನ ಸಿನಿಮಾಗಳಿಂದ ಗುರುತಿಸಲ್ಪಟ್ಟಿದ್ದಾರೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿರೋ ಹಿನ್ನೆಲೆ ಸಹಜವಾಗಿ ಪ್ರೇಕ್ಷಕರಲ್ಲಿ ಸಿನಿಮಾ ಹೇಗಿರಬಹುದೆಂಬ ಕುತೂಹಲ ಮೂಡಿದೆ. ಸಿನಿಮಾ ರಿಲೀಸ್ ಡೇಟ್ಗಾಗಿ ಅಭಿಮಾನಿಗಳು ಕಾತರರಾಗಿದ್ದರು. ಇತ್ತೀಚೆಗಷ್ಟೇ ‘ಇಬ್ಬನಿ ತಬ್ಬಿದ ಇಳೆಯಲಿ’ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಶೀಘ್ರದಲ್ಲೇ ಚಿತ್ರಮಂದಿರ ಪ್ರವೇಶಿಸಲಿರುವ ಈ ಚಿತ್ರದ ಟ್ರೇಲರ್ ಅನಾವರಣಕ್ಕೀಗ ದಿನ ನಿಗದಿ ಆಗಿದೆ.
: ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್ ಚಿತ್ರದ ಪೋಸ್ಟರ್ ಒಂದನ್ನು ಹಂಚಿಕೊಂಡಿದೆ. ಜೊತೆಗೆ, “ಇಬ್ಬನಿ ತಬ್ಬಿದ ಇಳೆಯಲಿ ಚಿತ್ರದ ಟ್ರೇಲರ್ ಆಗಸ್ಟ್ 22 ರಂದು ನಿಮ್ಮ ಮುಂದೆ. ಸುಂದರ ಕನಸಿನ ಭಾಗಗಳನ್ನು ಒಂದೆಡೆ ಸೇರಿಸುತ್ತಿದ್ದೇವೆ. ಜೊತೆಗೆ ಅದನ್ನು ಪ್ರೀತಿ, ಮ್ಯಾಜಿಕ್ನಿಂದ ಚಿಮುಕಿಸಲಿದ್ದೇವೆ. ಇಬ್ಬನಿ ತಬ್ಬಿದ ಇಳೆಯಲಿ ಟ್ರೇಲರ್ – ಆಗಸ್ಟ್ 22” ಎಂದು ಬರೆದುಕೊಂಡಿದೆ.
ಪೋಸ್ಟರ್ ಹಂಚಿಕೊಂಡ ನಿರ್ಮಾಪಕ ರಕ್ಷಿತ್ ಶೆಟ್ಟಿ, ಇದು ಯಾವುದೇ ಸುಂದರ, ಮ್ಯಾಜಿಕ್ ಕನಸಿಗೆ ಕಡಿಮೆಯಿಲ್ಲ. ಇಬ್ಬನಿ ತಬ್ಬಿದ ಇಳೆಯಲಿ ಟ್ರೇಲರ್ ಆಗಸ್ಟ್ 22ಕ್ಕೆ ಬಿಡುಗಡೆ ಆಗಲಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನು ತಿಳಿದ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಸಂತಸದ ಜೊತೆಗೆ ಉತ್ಸಾಹ ಹಂಚಿಕೊಳ್ಳುತ್ತಿದ್ದಾರೆ.
ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ ಆ್ಯಕ್ಷನ್ ಕಟ್ ಹೇಳಿರುವ ಈ ಪ್ರೇಮ್ಕಹಾನಿಯಲ್ಲಿ ವಿಹಾನ್ ಹಾಗೂ ಅಂಕಿತ ಅಮರ್ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ನಟಿ ಮಯೂರಿ ನಟರಾಜ್ ಅವರೂ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜಿ.ಎಸ್. ಗುಪ್ತ, ರಕ್ಷಿತ್ ಶೆಟ್ಟಿ ಸೇರಿ ತಮ್ಮ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಿಸಿದ್ದು, ಮುಂದಿನ ತಿಂಗಳ 5ರಂದು ಬಿಡುಗಡೆ ಆಗಲಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.