ಮನೆ ಉದ್ಯೋಗ ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಬೆಂಗಳೂರು(Bengaluru): ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದಿಂದ ವಿವಿಧ ಜಿಲ್ಲೆಗಳಲ್ಲಿ ವರದಿಗಾರರ ಹುದ್ದೆ ಕುರಿತಂತೆ ಪ್ರಕಟಣೆ ಹೊರಡಿಸಿದೆ.

ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಆಲ್ ಇಂಡಿಯಾ ರೇಡಿಯೋದ ಉಪ ನಿರ್ದೇಶಕರಾದ ಟಿ.ಬಿ.ನಂಜುಂಡಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆಗಳು: ಪಿ.ಜಿ ಡಿಪ್ಲೋಮಾ/ಪತ್ರಿಕೋದ್ಯಮ ಸಮೂಹ ಮಾಧ್ಯಮದಲ್ಲಿ ಪದವಿ ಹಾಗೂ ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಹೊಂದಿರಬೇಕು.